ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಭಾರೀ ಪ್ರವಾಹ ಭೀತಿ ಎದುರಾಗಿದೆ.
ಹಳೇ ಹಂಪಾಪುರ, ದಾಸನಪುರ, ಸರಗೂರು ಸೇರಿದಂತೆ 9 ಗ್ರಾಮಗಳಿಗೆ ನದಿಯ ನೀರು ನುಗ್ಗಿ ಹೊಲಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳು ಹಾಗೂ ಅಂಗನವಾಡಿಗೆ ನಾಳೆ ರಜೆ ಘೋಷಣೆ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಪ್ರವಾಹ ತಲೆದೂರಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ದರಿಂದ ಎಲ್ಲರೂ ಮುಂಜಾಗ್ರತೆ ವಹಿಸಬೇಕು. ಯಾರೂ ಕೂಡ ನದಿಯ ಬಳಿ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಕಾವೇರಿ ನದಿ ಆರ್ಭಟದಿಂದ ರೈತರು ಭಾರೀ ಸಂಕಷ್ಟಕ್ಕೆ ಈಡಾಗಿದ್ದು, ಬೆಳೆ ನಾಶದಿಂದ ಕಂಗಾಲಾಗಿದ್ದಾರೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…