ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.
ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು.
ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ ಹೇಳಿದ ಹಿನ್ನಲ್ಲೆ ಶುಕ್ರವಾರ ಬೆಳಿಗ್ಗೆ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಸುಧಾ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದನ್ನು ಕಂಡ ಮಹೇಶ್ ಬೆಂಕಿ ನಂದಿಸಲು ಮುಂದಾದಾಗ ಸುಧಾ ತನ್ನ ಗಂಡನನ್ನು ತಬ್ಬಿಡಿದುಕೊಂಡಿದ್ದಾಳೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಮನೆಯೊಳಗೆ ನುಗ್ಗಿ ಬೆಂಕಿ ನಂದಿಸಿ ಬೆಂಕಿಯಲ್ಲಿ ಗಾಯಗೊಂಡಿದ್ದ ದಂಪತಿಗಳಿಬ್ಬರನ್ನು ಆಸ್ಪತ್ರೆಗೆ ಕರೆ ತಂದಿದ್ದಾರೆ.
ಇದನ್ನು ಕಂಡ ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾ.ನಗರ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ವರದಿ : ಗಿರೀಶ್ ಕೊಳ್ಳೇಗಾಲ
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…