ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್, ಟಾಟಾ ಏಸ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿದೆ.
ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಇಂದು(ಮಾರ್ಚ್.25) ಬೈಕ್, ಟಾಟಾ ಏಸ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.
ಈ ದುರಂತದಲ್ಲಿ ಮೃತ ದುರ್ದೈವಿಗಳನ್ನು ಕೊಳ್ಳೇಗಾಲ ತಾಲೂಕಿನ ಬಾಣೂರು ಗ್ರಾಮದ ರಾಜಮ್ಮ (53) ಮತ್ತು ಶೃತಿ( 30) ಎಂದು ಗುರುತಿಸಲಾಗಿದೆ. ಅಲ್ಲದೇ ಅಪಘಾತದಲ್ಲಿ ಬೈಕ್ ಸವಾರ ಪ್ರಕಾಶ್, ಬಸ್ ಚಾಲಕ ರಾಜಶೇಖರ್ ಹಾಗೂ ಟಾಟಾ ಏಸ್ನಲ್ಲಿದ್ದ ಬಾಣೂರು ಗ್ರಾಮದ 13 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕಿತ್ಸೆಗಾಗಿ ಸಿಮ್ಸ್ ಮತ್ತು ಮೈಸೂರಿಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…