ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ 27 ವರ್ಷದ ಸೌಮ್ಯ, ಇವರ ಮಕ್ಕಳಾದ 9 ವರ್ಷದ ಅಭಿ ಹಾಗೂ ನಾಲ್ಕು ವರ್ಷದ ನಿತ್ಯಸಾಕ್ಷಿ ಎಂಬುವವರು ಸಂಕ್ರಾಂತಿ ಹಬ್ಬದ ದಿನವೇ ಮೃತಪಟ್ಟ ದುರ್ದೈವಿಗಳು.
ಹೌದು, ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಮಕ್ಕಳೊಂದಿಗೆ ತಂದೆ ತಾಯಿ ಪಾಳ್ಯ ಗ್ರಾಮದಿಂದ ಕೊಳ್ಳೇಗಾಲದ ದೇವಸ್ಥಾನವೊಂದಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ಇನ್ನು ಘಟನೆಗೆ ಭತ್ತ ಕಟಾವು ಯಂತ್ರದ ಚಾಲಕನ ಅಜಾಗರೂಕತೆಯ ಚಾಲನೆ ಕಾರಣ ಎನ್ನಲಾಗಿದೆ. ಬೈಕ್ ಡಿಕ್ಕಿ ಹೊಡೆದು ಸುಮಾರು ನಲವತ್ತು ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದು ರಸ್ತೆಯಲ್ಲಿ ಬರುತ್ತಿದ್ದವರು ಕೂಗಿಕೊಂಡಾಗ ವಾಹನ ನಿಲ್ಲಿಸಿದ ಚಾಲಕ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ.
ಇನ್ನು ಘಟನೆಯಲ್ಲಿ ತಂದೆ ತಾಯಿ ಹಾಗೂ ಪುತ್ರಿ ಸ್ಥಳದಲ್ಲೇ ಸಾವಿಗೀಡಾಗಿದ್ದು ತೀವ್ರ ಗಾಯಗೊಂಡಿದ್ದ ಪುತ್ರ ಅಭಿನನ್ನು ಚಾಮರಾಜನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಇನ್ನು ಘಟನಾ ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು, ಡಿವೈಎಸ್ಪಿ ಸೋಮೇಗೌಡ, ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಗ್ರಾಮಾಂತರ ಠಾಣೆಯ ಪಿಎಸ್ಐ ಗಣಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…