ಚಾಮರಾಜನಗರ

ಕೊಳ್ಳೇಗಾಲ: ತಿಮಿಂಗಲ ವಾಂತಿ (ಅಂಬರ್ ಗ್ರೀಸ್) ವಶ; ನಾಲ್ವರ ಬಂಧನ

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, ಮಂಗಳೂರು ತಾಲ್ಲೂಕಿನ ಉಳ್ಳಾಲ ಗ್ರಾಮದ ಶೇಷಪ್ಪ, ಮಂಗಳೂರಿನ ಸುರತ್ಕಲ್ ನಿವಾಸಿ ವೆಂಕಟೇಶ್ ಬಂಧಿತರಾಗಿದ್ದಾರೆ.

ತಮಿಳುನಾಡಿನ ಸೇಲಂ ಕಾಳಸಂತೆಯಲ್ಲಿ ಮಾರಲು ತಯಾರಿ ನಡೆಸಿದ್ದು, ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ನಂತರ ಟೀ ಕುಡಿಯಲು ನಿಂತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದೆ ಪಿಎಸ್‌ಐ ವಿಜಯರಾಜು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು.

ನಂತರ ಅವರ ಬಳಿ ಇದ್ದ ತಿಮಿಂಗಲ ವಾಂತಿ, ಮೊಬೈಲ್ ಫೋನ್, ಕಾರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago