ಚಾಮರಾಜನಗರ

ಕೊಳ್ಳೇಗಾಲ: ತಿಮಿಂಗಲ ವಾಂತಿ (ಅಂಬರ್ ಗ್ರೀಸ್) ವಶ; ನಾಲ್ವರ ಬಂಧನ

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, ಮಂಗಳೂರು ತಾಲ್ಲೂಕಿನ ಉಳ್ಳಾಲ ಗ್ರಾಮದ ಶೇಷಪ್ಪ, ಮಂಗಳೂರಿನ ಸುರತ್ಕಲ್ ನಿವಾಸಿ ವೆಂಕಟೇಶ್ ಬಂಧಿತರಾಗಿದ್ದಾರೆ.

ತಮಿಳುನಾಡಿನ ಸೇಲಂ ಕಾಳಸಂತೆಯಲ್ಲಿ ಮಾರಲು ತಯಾರಿ ನಡೆಸಿದ್ದು, ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ನಂತರ ಟೀ ಕುಡಿಯಲು ನಿಂತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದೆ ಪಿಎಸ್‌ಐ ವಿಜಯರಾಜು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು.

ನಂತರ ಅವರ ಬಳಿ ಇದ್ದ ತಿಮಿಂಗಲ ವಾಂತಿ, ಮೊಬೈಲ್ ಫೋನ್, ಕಾರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

14 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago