ಚಾಮರಾಜನಗರ

ಕೊಳ್ಳೇಗಾಲ: ತಿಮಿಂಗಲ ವಾಂತಿ (ಅಂಬರ್ ಗ್ರೀಸ್) ವಶ; ನಾಲ್ವರ ಬಂಧನ

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, ಮಂಗಳೂರು ತಾಲ್ಲೂಕಿನ ಉಳ್ಳಾಲ ಗ್ರಾಮದ ಶೇಷಪ್ಪ, ಮಂಗಳೂರಿನ ಸುರತ್ಕಲ್ ನಿವಾಸಿ ವೆಂಕಟೇಶ್ ಬಂಧಿತರಾಗಿದ್ದಾರೆ.

ತಮಿಳುನಾಡಿನ ಸೇಲಂ ಕಾಳಸಂತೆಯಲ್ಲಿ ಮಾರಲು ತಯಾರಿ ನಡೆಸಿದ್ದು, ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ನಂತರ ಟೀ ಕುಡಿಯಲು ನಿಂತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದೆ ಪಿಎಸ್‌ಐ ವಿಜಯರಾಜು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು.

ನಂತರ ಅವರ ಬಳಿ ಇದ್ದ ತಿಮಿಂಗಲ ವಾಂತಿ, ಮೊಬೈಲ್ ಫೋನ್, ಕಾರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago