ಚಾಮರಾಜನಗರ

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಕೆಂಡಗಣ್ಣಸ್ವಾಮಿ, ಶ್ರೀ ಮಲ್ಲೇಶ್ವರ ಸ್ವಾಮಿಯ ಕೊಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಕೊಂಡೋತ್ಸವದ ಹಿನ್ನೆಲೆಯಲ್ಲಿ ಈ ನಾಲ್ಕೂ ದೇಗುಲಗಳು ಹಾಗೂ ಗ್ರಾಮವನ್ನು ತಳಿರು-ತೋರಣ, ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 6.30 ರಿಂದ 9 ಗಂಟೆಯೊಳಗೆ ಸಲ್ಲುವ ಶುಭ ಲಗ್ನದಲ್ಲಿ ಶ್ರೀ ಕೆಂಡಗಣ್ಣಸ್ವಾಮಿ ದೇಗುಲದಲ್ಲಿ ಕಳಸ ಪೂಜೆ, ರುದ್ರಾ ಭಿಷೇಕ, ಗಣಪತಿ ಹೋಮ, ರುದ್ರಹೋಮ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಪೂಜೆ ನೆರವೇರಿಸಿ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಮಹಾ ಮಂಗಳಾರತಿ ಬೆಳಗಿಸಲಾಯಿತು.

11ರ ವೇಳೆಯಲ್ಲಿ ಉಪವಾಸವಿದ್ದ ಅರ್ಚಕರು ಹಾಗೂ ಗ್ರಾಮಸ್ಥರು ಸಮೀಪದ ಅರಣ್ಯ ಪ್ರದೇಶದಲ್ಲಿನ ಮುಂಬೆಟ್ಟದ ದೇಗುಲಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿ ಗ್ರಾಮದ ಬಸವನಗುಡಿಗೆ ಆಗಮಿಸಿದರು.

ಸಂಜೆ 4ರ ವೇಳೆಯಲ್ಲಿ ಬಸವನಗುಡಿಯಲ್ಲಿ ಕಾಮಗೆರೆ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಹೊಂಡರಬಾಳುವಿನ ಶ್ರೀ ಪ್ರಸನ್ನ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯ ಹಾಗೂ ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸತ್ತಿಗೆ, ಸೂರಿಪಾಣಿ, ಬಿರುದು ಬಾವಲಿ ಹಾಗೂ ನಂದಿಧ್ವಜ ಕಂಭಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಯ ವಾದ್ಯಮೇಳದೊಂದಿಗೆ ಕೊಂಡವನ್ನು ಹಾಯುವ ಅರ್ಚಕರನ್ನು ಬಸವ ಉತ್ಸವ ಮೂರ್ತಿಯ ವಾಹನ ದೊಂದಿಗೆ ಗ್ರಾಮದ ಕೆಂಡಗಣ್ಣಸ್ವಾಮಿ ಗದ್ದುಗೆಗೆ ಮೆರವಣಿಗೆಯ ಮೂಲಾ ಕರೆತರಲಾಯಿತು.

ವಿಜೃಂಭಣೆಯ ಕೊಂಡೋತ್ಸವ ಸಂಜೆ 6ರ ವೇಳೆಯಲ್ಲಿ ಕೆಂಡಗಣ್ಣಸ್ವಾಮಿ ಗದ್ದಿಗೆ ಮುಂಭಾಗ ಸಿದ್ಧಪಡಿಸಿದ್ದ ಕೊಂಡಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅರ್ಚಕರು ವೀರಾವೇಶದಿಂದ ಕೊಂಡ ಹಾಯ್ದರು. ಈ ವೇಳೆ ನೆರೆದಿದ್ದ ಸಾವಿರಾರು ಭಕ್ತರು ಘೋಷಣೆ ಕೂಗುತ್ತ ಕೊಂಡವನ್ನು ಹಾಯುವವರಲ್ಲಿ ಉತ್ಸಾಹ ಮೂಡಿಸಿದರು.

ಕೊಂಡೋತ್ಸವದಲ್ಲಿ ಹನೂರು ತಾಲೂಕಿನ ವಿವಿಧ ಗ್ರಾಮದ ಭಕ್ತರು ಸೇರಿದಂತ ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನದ ಹಾಗೂ ಇತರ ಜಿಲ್ಲೆಗಳ ಭಕ್ತರು ಭಾಗಿಯಾಗಿದ್ದರು. ದೇಗು ವತಿಯಿಂದ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು. ಗ್ರಾಪಂ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು ಹನೂರು ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಮಂಗಳವಾರ ಬಸವ ವಾಹನ, ಸತ್ತಿಗೆ, ಸತ್ತಿಗೆ, ಸೂರಿಪಾನಿ ಶ್ರೀಮಲ್ಲೇಶ್ವರ ಸ್ವಾಮಿ ಬಿರುದು ಬಾವಲಿಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago