ಚಾ. ನಗರದ ಕೃಷ್ಣಮೂರ್ತಿ ಹನೂರು ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿ : ಶಿವಣ್ಣ ಇಂದ್ವಾಡಿ

ಹನೂರು: ಜಾನಪದ ಸಾಹಿತಿ ಡಾ. ಕೃಷ್ಣಮೂರ್ತಿ ಹನೂರು ರವರು ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿಯಾಗಿದ್ದಾರೆ ಎಂದು ಸಾಹಿತಿ ನಿವೃತ್ತ ಅದ್ಯಾಪಕ ಶಿವಣ್ಣ ಇಂದ್ವಾಡಿ ರವರು ಅಭಿಪ್ರಾಯ ಪಟ್ಟರು.

ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹನೂರು ತಾಲ್ಲೋಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಜನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ ಹನೂರು ರವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾವುದೇ ಶಿಕ್ಷಣ ಪದವಿ ಪಡೆಯದೆ ನಮ್ಮ ಜನಪದರು ಮಲೆ ಮಾದೇಶ್ವರ ಮಂಟೇಸ್ವಾಮಿ ಮತ್ತು ಬಿಳಿಗಿರಿ ರಂಗನ ಕಾವ್ಯಗಳನ್ನು ಕಟ್ಟಿದ್ದಾರೆ. ಕನ್ನಡದ ದೊಡ್ಡ ದೊಡ್ಡ ವಿದ್ವಾಂಸರು ಬೆಳೆದಿರುವುದು ಅಜ್ಜಿ ಹೇಳುವ ಕತೆಗಳಿಂದ. ಅಂತಹ ಅಜ್ಜಿಯಂದಿರು ಮರಣಿಸಿದರೆ ಒಂದು ಜಾನಪದ ಗ್ರಂಥಾಲಯವೆ ಸತ್ತುಹೋದಂತೆ.

ಪರಸ್ಪರ ಸಂಬಂಧ ಬೆಳೆಸುವ ಮಕ್ಕಳ ಕತೆ, ಲಾಲಿಪದ, ಹೊಲಗದ್ದೆಗಳಲ್ಲಿ ಹಾಡುವ ಜಾನಪದ ಹಾಡುಗಳು ಇಂದು ಮರೆಯಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಟಿವಿ ಮತ್ತು ಮೊಬೈಲ್ ಮಾದ್ಯಮಗಳ ನಡುವೆ ಪ್ರೀತಿ, ಭಾಂದವ್ಯ ಮತ್ತು ಸಾಮಾಜಿಕ ಸಂಬಂಧಗಳಿಂದ ದೂರ ಉಳಿಯುವಂತೆ ಮಾಡುತ್ತಿವೆ. ಇಂತಹ ಪರಿಸರದಲ್ಲಿ ನಾವು ಬದುಕುತ್ತಿರುವುದು ದುರಂತ.

ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಜನಪದರು ಒತ್ತುತಂದ ಹಾಡುಗಳು ಹಾಗೂ ಸಾಹಿತಿಗಳು ರಚಿಸಿದ ಸಾಹಿತ್ಯವನ್ನು ಸ್ಮರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲೇಶ್ ಕುಮಾರ್ ರವರು ಚಾಮರಾಜನಗರ ಜಿಲ್ಲಾ ಕನ್ನಡ ಪರಿಷತ್ ಮೊದಲ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ರವರ ಶ್ರೇಷ್ಠ ಪರಂಪರೆಯ ಹಾದಿಯಲ್ಲಿ ನಾವು ಸಾಗುತ್ತಿದ್ದೇವೆ. ಕನ್ನಡ ಭಾಷೆ ಶುದ್ಧ, ವೈಜ್ಞಾನಿಕ ಮತ್ತು ಯಾವುದೇ ಸಂದರ್ಭದಲ್ಲಿಯೂ ಎಲ್ಲರಿಗೂ ಹೊಂದಿಕೊಳ್ಳುವ ಭಾಷೆಯಾಗಿದೆ. ಅನ್ಯ ರಾಜ್ಯಗಳಾದ ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳ ವರೆಗೆ ವಿಶಾಲ ಕರ್ನಾಟಕದ ಪಸರಿಸಿತ್ತು. ಈಗಲೂ ಸಹ ಆ ಭಾಗದಲ್ಲಿ ಕನ್ನಡದ ಕುರುಹು ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷ ಮಲ್ಲೇಶ್ ಮಹಾಲಿಂಗನಕಟ್ಟೆ, ವಿವೇಕಾನಂದ ಕಾಲೇಜು ಪ್ರಾಂಶುಪಾಲ ಮಧುಸೂಧನ್, ಸಂಚಾಲಕರಾದ ರಾಜೇಂದ್ರ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

andolana

Recent Posts

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.…

9 mins ago

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

32 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

55 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

60 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

2 hours ago