ಚಾ. ನಗರದ ಕೃಷ್ಣಮೂರ್ತಿ ಹನೂರು ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿ : ಶಿವಣ್ಣ ಇಂದ್ವಾಡಿ

ಹನೂರು: ಜಾನಪದ ಸಾಹಿತಿ ಡಾ. ಕೃಷ್ಣಮೂರ್ತಿ ಹನೂರು ರವರು ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿಯಾಗಿದ್ದಾರೆ ಎಂದು ಸಾಹಿತಿ ನಿವೃತ್ತ ಅದ್ಯಾಪಕ ಶಿವಣ್ಣ ಇಂದ್ವಾಡಿ ರವರು ಅಭಿಪ್ರಾಯ ಪಟ್ಟರು.

ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹನೂರು ತಾಲ್ಲೋಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಜನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ ಹನೂರು ರವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾವುದೇ ಶಿಕ್ಷಣ ಪದವಿ ಪಡೆಯದೆ ನಮ್ಮ ಜನಪದರು ಮಲೆ ಮಾದೇಶ್ವರ ಮಂಟೇಸ್ವಾಮಿ ಮತ್ತು ಬಿಳಿಗಿರಿ ರಂಗನ ಕಾವ್ಯಗಳನ್ನು ಕಟ್ಟಿದ್ದಾರೆ. ಕನ್ನಡದ ದೊಡ್ಡ ದೊಡ್ಡ ವಿದ್ವಾಂಸರು ಬೆಳೆದಿರುವುದು ಅಜ್ಜಿ ಹೇಳುವ ಕತೆಗಳಿಂದ. ಅಂತಹ ಅಜ್ಜಿಯಂದಿರು ಮರಣಿಸಿದರೆ ಒಂದು ಜಾನಪದ ಗ್ರಂಥಾಲಯವೆ ಸತ್ತುಹೋದಂತೆ.

ಪರಸ್ಪರ ಸಂಬಂಧ ಬೆಳೆಸುವ ಮಕ್ಕಳ ಕತೆ, ಲಾಲಿಪದ, ಹೊಲಗದ್ದೆಗಳಲ್ಲಿ ಹಾಡುವ ಜಾನಪದ ಹಾಡುಗಳು ಇಂದು ಮರೆಯಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಟಿವಿ ಮತ್ತು ಮೊಬೈಲ್ ಮಾದ್ಯಮಗಳ ನಡುವೆ ಪ್ರೀತಿ, ಭಾಂದವ್ಯ ಮತ್ತು ಸಾಮಾಜಿಕ ಸಂಬಂಧಗಳಿಂದ ದೂರ ಉಳಿಯುವಂತೆ ಮಾಡುತ್ತಿವೆ. ಇಂತಹ ಪರಿಸರದಲ್ಲಿ ನಾವು ಬದುಕುತ್ತಿರುವುದು ದುರಂತ.

ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಜನಪದರು ಒತ್ತುತಂದ ಹಾಡುಗಳು ಹಾಗೂ ಸಾಹಿತಿಗಳು ರಚಿಸಿದ ಸಾಹಿತ್ಯವನ್ನು ಸ್ಮರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲೇಶ್ ಕುಮಾರ್ ರವರು ಚಾಮರಾಜನಗರ ಜಿಲ್ಲಾ ಕನ್ನಡ ಪರಿಷತ್ ಮೊದಲ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ರವರ ಶ್ರೇಷ್ಠ ಪರಂಪರೆಯ ಹಾದಿಯಲ್ಲಿ ನಾವು ಸಾಗುತ್ತಿದ್ದೇವೆ. ಕನ್ನಡ ಭಾಷೆ ಶುದ್ಧ, ವೈಜ್ಞಾನಿಕ ಮತ್ತು ಯಾವುದೇ ಸಂದರ್ಭದಲ್ಲಿಯೂ ಎಲ್ಲರಿಗೂ ಹೊಂದಿಕೊಳ್ಳುವ ಭಾಷೆಯಾಗಿದೆ. ಅನ್ಯ ರಾಜ್ಯಗಳಾದ ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳ ವರೆಗೆ ವಿಶಾಲ ಕರ್ನಾಟಕದ ಪಸರಿಸಿತ್ತು. ಈಗಲೂ ಸಹ ಆ ಭಾಗದಲ್ಲಿ ಕನ್ನಡದ ಕುರುಹು ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷ ಮಲ್ಲೇಶ್ ಮಹಾಲಿಂಗನಕಟ್ಟೆ, ವಿವೇಕಾನಂದ ಕಾಲೇಜು ಪ್ರಾಂಶುಪಾಲ ಮಧುಸೂಧನ್, ಸಂಚಾಲಕರಾದ ರಾಜೇಂದ್ರ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

andolana

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

1 hour ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

3 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

4 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

4 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

5 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

7 hours ago