ಹನೂರು: ಜಾನಪದ ಸಾಹಿತಿ ಡಾ. ಕೃಷ್ಣಮೂರ್ತಿ ಹನೂರು ರವರು ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿಯಾಗಿದ್ದಾರೆ ಎಂದು ಸಾಹಿತಿ ನಿವೃತ್ತ ಅದ್ಯಾಪಕ ಶಿವಣ್ಣ ಇಂದ್ವಾಡಿ ರವರು ಅಭಿಪ್ರಾಯ ಪಟ್ಟರು.
ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹನೂರು ತಾಲ್ಲೋಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಜನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ ಹನೂರು ರವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಶಿಕ್ಷಣ ಪದವಿ ಪಡೆಯದೆ ನಮ್ಮ ಜನಪದರು ಮಲೆ ಮಾದೇಶ್ವರ ಮಂಟೇಸ್ವಾಮಿ ಮತ್ತು ಬಿಳಿಗಿರಿ ರಂಗನ ಕಾವ್ಯಗಳನ್ನು ಕಟ್ಟಿದ್ದಾರೆ. ಕನ್ನಡದ ದೊಡ್ಡ ದೊಡ್ಡ ವಿದ್ವಾಂಸರು ಬೆಳೆದಿರುವುದು ಅಜ್ಜಿ ಹೇಳುವ ಕತೆಗಳಿಂದ. ಅಂತಹ ಅಜ್ಜಿಯಂದಿರು ಮರಣಿಸಿದರೆ ಒಂದು ಜಾನಪದ ಗ್ರಂಥಾಲಯವೆ ಸತ್ತುಹೋದಂತೆ.
ಪರಸ್ಪರ ಸಂಬಂಧ ಬೆಳೆಸುವ ಮಕ್ಕಳ ಕತೆ, ಲಾಲಿಪದ, ಹೊಲಗದ್ದೆಗಳಲ್ಲಿ ಹಾಡುವ ಜಾನಪದ ಹಾಡುಗಳು ಇಂದು ಮರೆಯಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಟಿವಿ ಮತ್ತು ಮೊಬೈಲ್ ಮಾದ್ಯಮಗಳ ನಡುವೆ ಪ್ರೀತಿ, ಭಾಂದವ್ಯ ಮತ್ತು ಸಾಮಾಜಿಕ ಸಂಬಂಧಗಳಿಂದ ದೂರ ಉಳಿಯುವಂತೆ ಮಾಡುತ್ತಿವೆ. ಇಂತಹ ಪರಿಸರದಲ್ಲಿ ನಾವು ಬದುಕುತ್ತಿರುವುದು ದುರಂತ.
ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಜನಪದರು ಒತ್ತುತಂದ ಹಾಡುಗಳು ಹಾಗೂ ಸಾಹಿತಿಗಳು ರಚಿಸಿದ ಸಾಹಿತ್ಯವನ್ನು ಸ್ಮರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲೇಶ್ ಕುಮಾರ್ ರವರು ಚಾಮರಾಜನಗರ ಜಿಲ್ಲಾ ಕನ್ನಡ ಪರಿಷತ್ ಮೊದಲ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ರವರ ಶ್ರೇಷ್ಠ ಪರಂಪರೆಯ ಹಾದಿಯಲ್ಲಿ ನಾವು ಸಾಗುತ್ತಿದ್ದೇವೆ. ಕನ್ನಡ ಭಾಷೆ ಶುದ್ಧ, ವೈಜ್ಞಾನಿಕ ಮತ್ತು ಯಾವುದೇ ಸಂದರ್ಭದಲ್ಲಿಯೂ ಎಲ್ಲರಿಗೂ ಹೊಂದಿಕೊಳ್ಳುವ ಭಾಷೆಯಾಗಿದೆ. ಅನ್ಯ ರಾಜ್ಯಗಳಾದ ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳ ವರೆಗೆ ವಿಶಾಲ ಕರ್ನಾಟಕದ ಪಸರಿಸಿತ್ತು. ಈಗಲೂ ಸಹ ಆ ಭಾಗದಲ್ಲಿ ಕನ್ನಡದ ಕುರುಹು ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷ ಮಲ್ಲೇಶ್ ಮಹಾಲಿಂಗನಕಟ್ಟೆ, ವಿವೇಕಾನಂದ ಕಾಲೇಜು ಪ್ರಾಂಶುಪಾಲ ಮಧುಸೂಧನ್, ಸಂಚಾಲಕರಾದ ರಾಜೇಂದ್ರ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…