ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್ಟಿಸಿ ಬಸ್ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್ ವಾಹನ ಡಿಕ್ಕಿಯಿಂದ ಬಸ್ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್ ಕುಮಾರ್ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ.
ಮೃತಪಟ್ಟ ಮಹಿಳೆ ಗುಂಡ್ಲುಪೇಟೆ ತಾಲೂಕಿನ ಹಾಲನಹಳ್ಳಿ ಗ್ರಾಮದ ಶಿವಲಿಂಗಮ್ಮ.
ಕೆಎಸ್ಆರ್ಟಿಸಿ ಬಸ್ ನಂಜನಗೂಡು ಮಾರ್ಗವಾಗಿ ಗುಂಡ್ಲಪೇಟೆಗೆ ಹೋಗುವ ವೇಳೆ ಕಡುಬಿನ ಕಟ್ಟೆ ಹತಿರ ಕಾರನ್ನು ಓವರ್ಟೇಕ್ ಮಾಡಲು ಹೋಗಿ ಮಧ್ಯಭಾಗಕ್ಕೆ ಬಂದಿದೆ. ಈ ವೇಳೆ ಶಿವಲಿಂಗಮ್ಮ ತಲೆಯನ್ನು ಕಿಟಕಿಯಿಂದ ಹೊರಹಾಕಿದ ಪರಿಣಾಮ ಎದುರಿಗೆ ಬಂದು ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದು ರುಂಡವು ತುಂಡರಿಸಿತ್ತು.
ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ ನಿಯಂತ್ರಣಾಧಿಕಾರಿ ಆಶೋಕ್ ಕುಮಾರ್ ಮೃತರ ಮಗ ಕಾರ್ತಿಕ್ ಅವರಿಗೆ 10 ಲಕ್ಷ ರೂ.ಗಳ ಚೆಕ್ ಅನ್ನು ಪರಿಹಾರವಾಗಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ಎಸ್.ಎಸ್.ದಶರಥ, ಸಹಾಯಕ ಕಾನೂನು ಅಧಿಕಾರಿ ಶಿವಣ್ಣ, ಸಹಾಯಕ ಲೆಕ್ಕಾಧಿಕಾರಿ ರುದ್ರಮುನಿ, ಭದ್ರತಾ ನಿರೀಕ್ಷಕ ನಾಗೇಂದ್ರ ಇದ್ದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…