ಚಾಮರಾಜನಗರ

ಬಸ್ ಪ್ರಯಾಣದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ಯಿಂದ 10 ಲಕ್ಷ ರೂ. ಪರಿಹಾರ

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್‌ ಕುಮಾರ್‌ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ.

ಮೃತಪಟ್ಟ ಮಹಿಳೆ ಗುಂಡ್ಲುಪೇಟೆ ತಾಲೂಕಿನ ಹಾಲನಹಳ್ಳಿ ಗ್ರಾಮದ ಶಿವಲಿಂಗಮ್ಮ.

ಕೆಎಸ್‌ಆರ್‌ಟಿಸಿ ಬಸ್‌ ನಂಜನಗೂಡು ಮಾರ್ಗವಾಗಿ ಗುಂಡ್ಲಪೇಟೆಗೆ ಹೋಗುವ ವೇಳೆ ಕಡುಬಿನ ಕಟ್ಟೆ ಹತಿರ ಕಾರನ್ನು ಓವರ್ಟೇಕ್‌ ಮಾಡಲು ಹೋಗಿ ಮಧ್ಯಭಾಗಕ್ಕೆ ಬಂದಿದೆ. ಈ ವೇಳೆ ಶಿವಲಿಂಗಮ್ಮ ತಲೆಯನ್ನು ಕಿಟಕಿಯಿಂದ ಹೊರಹಾಕಿದ ಪರಿಣಾಮ  ಎದುರಿಗೆ ಬಂದು ಗೂಡ್ಸ್‌ ವಾಹನವೊಂದು ಡಿಕ್ಕಿ ಹೊಡೆದು ರುಂಡವು ತುಂಡರಿಸಿತ್ತು.

ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ ನಿಯಂತ್ರಣಾಧಿಕಾರಿ ಆಶೋಕ್‌ ಕುಮಾರ್‌ ಮೃತರ ಮಗ ಕಾರ್ತಿಕ್‌ ಅವರಿಗೆ 10 ಲಕ್ಷ ರೂ.ಗಳ ಚೆಕ್‌ ಅನ್ನು ಪರಿಹಾರವಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ಎಸ್‌.ಎಸ್‌.ದಶರಥ, ಸಹಾಯಕ ಕಾನೂನು ಅಧಿಕಾರಿ ಶಿವಣ್ಣ, ಸಹಾಯಕ ಲೆಕ್ಕಾಧಿಕಾರಿ ರುದ್ರಮುನಿ,  ಭದ್ರತಾ ನಿರೀಕ್ಷಕ ನಾಗೇಂದ್ರ ಇದ್ದರು.

 

 

AddThis Website Tools
ಆಂದೋಲನ ಡೆಸ್ಕ್

Recent Posts

ಮತ್ತೆ ಬರಲಿರುವ ರಾಮಾಚಾರಿ ಇದು ‘ನಾಗರಹಾವು’ ಚಿತ್ರದ ಮುಂದಿನ ಭಾಗ

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…

3 hours ago

ಕಿಡಿ ಹೊತ್ತಿಸಲು ಬಂದ ನಿರಂಜನ್ ಹೊಸ ಚಿತ್ರ ‘ಸ್ಪಾರ್ಕ್’ ಪ್ರಾರಂಭ

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…

3 hours ago

ಪುನೀತ್‌ 50 ʼಅಪ್ಪುʼ ಮರು ಬಿಡುಗಡೆ

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್‌ ಇಲ್ಲದ…

3 hours ago

ನಮಗೆ ಏಕೆ ಕಡಿಮೆ ಸಂಭಾವನೆ: ರಮ್ಯಾ ದಿಟ್ಟ ಪ್ರಶ್ನೆ

ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ  ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ…

3 hours ago

ಓದುಗರ ಪತ್ರ: ವಾಹನ ದಟ್ಟಣೆ ನಿಯಂತ್ರಿಸಿ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ…

3 hours ago

ಓದುಗರ ಪತ್ರ: ಪೊಲೀಸ್ ಇಲಾಖೆಗೆ ಅಭಿನಂದನೆಗಳು

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ…

3 hours ago