ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್ಟಿಸಿ ಬಸ್ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್ ವಾಹನ ಡಿಕ್ಕಿಯಿಂದ ಬಸ್ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್ ಕುಮಾರ್ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ.
ಮೃತಪಟ್ಟ ಮಹಿಳೆ ಗುಂಡ್ಲುಪೇಟೆ ತಾಲೂಕಿನ ಹಾಲನಹಳ್ಳಿ ಗ್ರಾಮದ ಶಿವಲಿಂಗಮ್ಮ.
ಕೆಎಸ್ಆರ್ಟಿಸಿ ಬಸ್ ನಂಜನಗೂಡು ಮಾರ್ಗವಾಗಿ ಗುಂಡ್ಲಪೇಟೆಗೆ ಹೋಗುವ ವೇಳೆ ಕಡುಬಿನ ಕಟ್ಟೆ ಹತಿರ ಕಾರನ್ನು ಓವರ್ಟೇಕ್ ಮಾಡಲು ಹೋಗಿ ಮಧ್ಯಭಾಗಕ್ಕೆ ಬಂದಿದೆ. ಈ ವೇಳೆ ಶಿವಲಿಂಗಮ್ಮ ತಲೆಯನ್ನು ಕಿಟಕಿಯಿಂದ ಹೊರಹಾಕಿದ ಪರಿಣಾಮ ಎದುರಿಗೆ ಬಂದು ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದು ರುಂಡವು ತುಂಡರಿಸಿತ್ತು.
ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ ನಿಯಂತ್ರಣಾಧಿಕಾರಿ ಆಶೋಕ್ ಕುಮಾರ್ ಮೃತರ ಮಗ ಕಾರ್ತಿಕ್ ಅವರಿಗೆ 10 ಲಕ್ಷ ರೂ.ಗಳ ಚೆಕ್ ಅನ್ನು ಪರಿಹಾರವಾಗಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ಎಸ್.ಎಸ್.ದಶರಥ, ಸಹಾಯಕ ಕಾನೂನು ಅಧಿಕಾರಿ ಶಿವಣ್ಣ, ಸಹಾಯಕ ಲೆಕ್ಕಾಧಿಕಾರಿ ರುದ್ರಮುನಿ, ಭದ್ರತಾ ನಿರೀಕ್ಷಕ ನಾಗೇಂದ್ರ ಇದ್ದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…