ಚಾಮರಾಜನಗರ

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ.

ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ ಲಿಖಿತ, ರುಕ್ಮಿಣಿ, ಕೊಳ್ಳೇಗಾಲದ ಮಂಜುನಾಥ್, ಕಾವ್ಯ, ಪ್ರತಾಪ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ, ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಜ್ಯೋತಿರವರಿಗೆ, ಮೈಸೂರಿನ ಇಲವಾಲದ ಮಹೇಶ್ ರವರಿಗೆ ಬಲಕೈಕಾಲು ತೀವ್ರ ಗಾಯವಾಗಿವೆ. ಕೊಳ್ಳೇಗಾಲ ಮೂಲದ ಸಣ್ಣಮ್ಮ ಎಂಬುವರಿಗೆ ಸೊಂಟ ಮುರಿದಿದ್ದು ಸ್ಫೈನಲ್ ಕಾರ್ಡ್ ಮುರಿದಿರುವುದರಿಂದ ತೀವ್ರ ಗಾಯಗೊಂಡಿದ್ದಾರೆ.

ಘಟನೆ ವಿವರ: ವಿವಿಧ ಗ್ರಾಮಗಳಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಪಸ್ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಸಂಖ್ಯೆ ( KA-09 F5111)ಮೂಲಕ 50 ಪ್ರಯಾಣಿಕರು ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹಾಲರವಿ ಹಳ್ಳದ ಸಮೀಪ ಬಸ್ ಪಲ್ಟಿಯಾಗಿದೆ.

ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಾಧಿಕಾರದ ನೂತನ ಆಂಬುಲೆನ್ಸ್ ಹಾಗೂ ೧೦೮ ಆಂಬುಲೆನ್ಸ್ ಮೂಲಕ ಕೆಲವು ಗಾಯಾಳುಗಳನ್ನು ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ, ಹೆಚ್ಚು ಗಾಯಗೊಂಡಿದ್ದ ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಬಸ್ ಚಾಲಕ ಅನಿಲ್ ಕುಮಾರ್ ಹಾಗೂ ನಿರ್ವಾಹಕ ಜಗದೀಶ್ ರವರು ಸಹ ಗಾಯಗೊಂಡಿದ್ದಾರೆ. ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಸ್ ಚಾಲಕ ಅನಿಲ್ ಬ್ರೇಕ್ ಪೆಲ್ ಆಗಿ ಪಲ್ಟಿಯಾಗಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಯಾಣಿಕರು ಬಸ್ ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಪ್ರಾಧಿಕಾರದ ಕಾರ್ಯದರ್ಶಿ ರಘು, ಡಿಎಚ್ಒ ಡಾ, ಚಿದಂಬರಂ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಮ.ಬೆಟ್ಟದ ಇನ್ಸ್‌ಪೆಕ್ಟರ್ ಜಗದೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯ‌ ಪ್ರವೃತ್ತರಾಗಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಸೂಕ್ತ ಕ್ರಮ ವಹಿಸಿದ್ದಾರೆ.

ಘಟನೆಯ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

8 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

8 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

8 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

8 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

8 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

8 hours ago