ಚಾಮರಾಜನಗರ

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; ಡ್ರೈವರ್‌ ಬದಲು ಕಂಡಕ್ಟರ್‌ ಬಸ್‌ ಚಲಾಯಿಸಿದ್ದೇ ಕಾರಣ ಎಂದ ಪ್ರಯಾಣಿಕರು!

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಸಮೀಪ ಜರುಗಿದೆ.

ಕೊಳ್ಳೇಗಾಲ ಪಟ್ಟಣದಿಂದ ಮಂಗಲ, ಚನ್ನಾಲಿಂಗನಹಳ್ಳಿ, ಲೊಕನಹಳ್ಳಿ ,ಒಡೆಯರಪಾಳ್ಯ ಮಾರ್ಗವಾಗಿ ಬೈಲೂರು ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಸುಮಾರು ಐದಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಈ ಬಸ್ ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಲೊಕನಹಳ್ಳಿ ,ಒಡೆಯರಪಾಳ್ಯ ಬೈಲೂರು ಗ್ರಾಮದ ವಿವಿಧ ಶಾಲೆಗಳಿಗೆ ಶಿಕ್ಷಕರು, ಶಿಕ್ಷಕಿಯರು ವಿದ್ಯಾರ್ಥಿಗಳು ಪ್ರತಿದಿನ ಈ ಬಸ್ ನಲ್ಲಿ ತೆರಳುತ್ತಿದ್ದರು. ಇಂದು ಚಾಲಕನ ಬದಲು ನಿರ್ವಾಹಕ ಬಸ್ ಚಾಲನೆ ಮಾಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ಆರೋಪಿಸಿದ್ದಾರೆ.

 

ಬಸ್ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಲಗಡೆಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕೇವಲ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರಿಗೆ ಮೂಳೆ ಹಾಗೂ ಹೊಟ್ಟೆ ಸೇರಿದಂತೆ ದೇಹದ ವಿವಿಧ ಒಳ ಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಬಸ್ ಪಲ್ಟಿಯಾಗಿರುವ ಘಟನೆ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಗ್ರಾಮಸ್ಥರು ಜಮಾವಣಿಗೊಂಡು ಬಸ್ ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಪರಿವರ್ತನಾ ಗ್ರಾಮ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಮಾತನಾಡಿ ಒಡೆಯರಪಾಳ್ಯ ಭಾಗದಲ್ಲಿ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ಗಳು ತುಂಬಾ ಹಳೆಯದಾಗಿದ್ದು ಗುಣಮಟ್ಟದಿಂದ ಕೂಡಿಲ್ಲ, ಕಳೆದ ಒಂದು ವರ್ಷದ ಹಿಂದೆ ಪಿಜಿ ಪಾಳ್ಯ ಸಮೀಪದ ಹಳ್ಳಕ್ಕೆ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 6 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇಷ್ಟಾದರೂ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ ಇನ್ನು ಮುಂದಾದರು ಈ ಭಾಗಕ್ಕೆ ಉತ್ತಮ ಗುಣಮಟ್ಟದ ಹೊಸ ಬಸ್ ಗಳನ್ನು ಬಿಡಬೇಕು, ನಿರ್ವಾಹಕನ ಕೆಲಸ ಮಾಡುವ ಬದಲು ಚಾಲಕನ ಕೆಲಸ ಮಾಡಿ ಬಸ್ ಪಲ್ಟಿ ಮಾಡಿರುವ ನಿರ್ವಾಹಕನ ವಿರುದ್ಧ ಹಾಗೂ ತನ್ನ ಜವಾಬ್ದಾರಿಯನ್ನು ಮರೆತು ನಿರ್ವಾಹಕನಿಗೆ ಬಸ್ ನೀಡಿರುವ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಒಡೆಯರಪಾಳ್ಯ ಮಾರ್ಗದಲ್ಲಿ ಸಂಚರಿಸುತ್ತಿರುವ ಕೆಎಸ್ಆರ್ ಟಿಸಿ ಬಸ್ ಗಳು ಎಲ್ಲೆಂದರಲ್ಲಿ ದುರಸ್ತಿಯಾಗಿ ನಿಲ್ಲುತ್ತಿದೆ.

ಈ ಸಂಬಂಧ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರು ಪ್ರಯೋಜನವಾಗಿಲ್ಲ ಅದೃಷ್ಟವಶಾತ್ ದೇವರ ದಯೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ಇನ್ನು ಮುಂದಾದರು ನೂತನ ಬಸ್ ಗಳನ್ನು ಈ ಮಾರ್ಗಕ್ಕೆ ಬಿಡಬೇಕು.

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago