ಚಾಮರಾಜನಗರ

ಮ.ಬೆಟ್ಟದಲ್ಲಿ ಕುಂಬೋತ್ಸವ ಸೇವೆ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಶನಿವಾರ ಬೆಳಿಗ್ಗೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘುರವರ ನೇತೃತ್ವದಲ್ಲಿ
ಬೇಡಗಂಪಣ ಅರ್ಚಕರು ಸ್ವಾಮಿಗೆ ವಿವಿಧ ಹೋಮ-ಹವನ, ಪೂಜೆಗಳನ್ನು ನೆರವೇರಿಸಿದರು.

ಇದರೊಟ್ಟಿಗೆ, ೧೦೮ ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು.

ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರಗಳೊಂದಿಗೆ ೧೦೮ ಅರ್ಚಕರು ಕುಂಭ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು. ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿಸಿದರು.

ಮೆರವಣಿಗೆಯಲ್ಲಿ ಉಮಾಮಹೇಶ್ವರಿ, ನಂದಿಕಂಬ, ವೀರಗಾಸೆ ಕುಣಿತ ಕಲಾತಂಡಗಳು ಭಾಗವಹಿಸಿದ್ದವು. ಬೆನಕನ ಅಮಾವಾಸ್ಯೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಸಮುದಾಯದ ಹಿರಿಯರಾದ ಕೆ.ವಿ.ಮಾದೇಶ್, ಆಗಮಿಕರಾದ ಕರವೀರಸ್ವಾಮಿ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಪಾರುಪತ್ತೆಗಾರ ಮಹದೇವಸ್ವಾಮಿ, ಬೇಡಗಂಪಣ ಸರದಿ ಅರ್ಚಕರು, ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

25 mins ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

26 mins ago

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

50 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

1 hour ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

1 hour ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

2 hours ago