ಚಾಮರಾಜನಗರ

ಮ.ಬೆಟ್ಟದಲ್ಲಿ ಕುಂಬೋತ್ಸವ ಸೇವೆ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಶನಿವಾರ ಬೆಳಿಗ್ಗೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘುರವರ ನೇತೃತ್ವದಲ್ಲಿ
ಬೇಡಗಂಪಣ ಅರ್ಚಕರು ಸ್ವಾಮಿಗೆ ವಿವಿಧ ಹೋಮ-ಹವನ, ಪೂಜೆಗಳನ್ನು ನೆರವೇರಿಸಿದರು.

ಇದರೊಟ್ಟಿಗೆ, ೧೦೮ ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು.

ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರಗಳೊಂದಿಗೆ ೧೦೮ ಅರ್ಚಕರು ಕುಂಭ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು. ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿಸಿದರು.

ಮೆರವಣಿಗೆಯಲ್ಲಿ ಉಮಾಮಹೇಶ್ವರಿ, ನಂದಿಕಂಬ, ವೀರಗಾಸೆ ಕುಣಿತ ಕಲಾತಂಡಗಳು ಭಾಗವಹಿಸಿದ್ದವು. ಬೆನಕನ ಅಮಾವಾಸ್ಯೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಸಮುದಾಯದ ಹಿರಿಯರಾದ ಕೆ.ವಿ.ಮಾದೇಶ್, ಆಗಮಿಕರಾದ ಕರವೀರಸ್ವಾಮಿ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಪಾರುಪತ್ತೆಗಾರ ಮಹದೇವಸ್ವಾಮಿ, ಬೇಡಗಂಪಣ ಸರದಿ ಅರ್ಚಕರು, ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago