ಚಾಮರಾಜನಗರ

ಮ.ಬೆಟ್ಟದಲ್ಲಿ ಕುಂಬೋತ್ಸವ ಸೇವೆ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಶನಿವಾರ ಬೆಳಿಗ್ಗೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘುರವರ ನೇತೃತ್ವದಲ್ಲಿ
ಬೇಡಗಂಪಣ ಅರ್ಚಕರು ಸ್ವಾಮಿಗೆ ವಿವಿಧ ಹೋಮ-ಹವನ, ಪೂಜೆಗಳನ್ನು ನೆರವೇರಿಸಿದರು.

ಇದರೊಟ್ಟಿಗೆ, ೧೦೮ ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು.

ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರಗಳೊಂದಿಗೆ ೧೦೮ ಅರ್ಚಕರು ಕುಂಭ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು. ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿಸಿದರು.

ಮೆರವಣಿಗೆಯಲ್ಲಿ ಉಮಾಮಹೇಶ್ವರಿ, ನಂದಿಕಂಬ, ವೀರಗಾಸೆ ಕುಣಿತ ಕಲಾತಂಡಗಳು ಭಾಗವಹಿಸಿದ್ದವು. ಬೆನಕನ ಅಮಾವಾಸ್ಯೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಸಮುದಾಯದ ಹಿರಿಯರಾದ ಕೆ.ವಿ.ಮಾದೇಶ್, ಆಗಮಿಕರಾದ ಕರವೀರಸ್ವಾಮಿ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಪಾರುಪತ್ತೆಗಾರ ಮಹದೇವಸ್ವಾಮಿ, ಬೇಡಗಂಪಣ ಸರದಿ ಅರ್ಚಕರು, ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago