Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಹೊರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ ಪೊಲೀಸರು ಬ್ಯಾರಿಕೇಡ್ ಆಳವಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ರಾಮನಗರ, ಬೆಂಗಳೂರು, ಕನಕಪುರ, ಕೋಲಾರ, ತುಮಕೂರು, ಮಾಗಡಿ, ಚನ್ನಪಟ್ಟಣ ಸೇರಿದಂತೆ ಇನ್ನಿತರ ತಾಲ್ಲೂಕಿನ ಗ್ರಾಮಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕಾವೇರಿ ನದಿ ದಾಟಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯ ರಸ್ತೆಯ ಮೂಲಕ ಆಗಮಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಪ್ರಮುಖ ತಿರುವುಗಳಲ್ಲಿ ಹನೂರು, ರಾಮಾಪುರ, ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗಳಾದ ಆನಂದಮೂರ್ತಿ, ಚಿಕ್ಕರಾಜ ಶೆಟ್ಟಿ, ಜಗದೀಶ್ ನೇತೃತ್ವದಲ್ಲಿ ಬ್ಯಾರಿಕೇಡ್ ಅಳವಡಿಸಿ ನಾಮಫಲಕಗಳನ್ನು ಹಾಕುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಪಾದಯಾತ್ರಿಕರು ಮುಖ್ಯರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸಿ, ತೀವ್ರ ತಿರುವುಗಳಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವೇಗ ಕಡಿಮೆ ಮಾಡಿ ಚಲಿಸುವಂತೆ ನಾಮಫಲಕ ಹಾಕುವ ಮೂಲಕ ವಿಶೇಷವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

 

Tags:
error: Content is protected !!