ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಹೊರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ ಪೊಲೀಸರು ಬ್ಯಾರಿಕೇಡ್ ಆಳವಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ರಾಮನಗರ, ಬೆಂಗಳೂರು, ಕನಕಪುರ, ಕೋಲಾರ, ತುಮಕೂರು, ಮಾಗಡಿ, ಚನ್ನಪಟ್ಟಣ ಸೇರಿದಂತೆ ಇನ್ನಿತರ ತಾಲ್ಲೂಕಿನ ಗ್ರಾಮಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕಾವೇರಿ ನದಿ ದಾಟಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯ ರಸ್ತೆಯ ಮೂಲಕ ಆಗಮಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಪ್ರಮುಖ ತಿರುವುಗಳಲ್ಲಿ ಹನೂರು, ರಾಮಾಪುರ, ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗಳಾದ ಆನಂದಮೂರ್ತಿ, ಚಿಕ್ಕರಾಜ ಶೆಟ್ಟಿ, ಜಗದೀಶ್ ನೇತೃತ್ವದಲ್ಲಿ ಬ್ಯಾರಿಕೇಡ್ ಅಳವಡಿಸಿ ನಾಮಫಲಕಗಳನ್ನು ಹಾಕುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಪಾದಯಾತ್ರಿಕರು ಮುಖ್ಯರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸಿ, ತೀವ್ರ ತಿರುವುಗಳಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವೇಗ ಕಡಿಮೆ ಮಾಡಿ ಚಲಿಸುವಂತೆ ನಾಮಫಲಕ ಹಾಕುವ ಮೂಲಕ ವಿಶೇಷವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago