ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಧಾರಾಕಾರ ಮಳೆಗೆ ನೆರೆಯ ಕೇರಳ ರಾಜ್ಯದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದಿಂದ ಕೇರಳಕ್ಕೆ ಹೋಗಿ ಬರುವವರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಸಂಪೂರ್ಣ ವಿವರ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದ್ದಾರೆ.
ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂಕುಸಿತದಲ್ಲಿ ಅಂದಾಜು 70 ಜನರು ಸಿಲುಕಿರುವ ಬಗ್ಗೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಪ್ರವಾಸ, ಜೀವನೋಪಾಯ ಹಾಗೂ ಇನ್ನಿತರೆ ಕಾರಣಕ್ಕೆ ತೆರಳಿರುವವರ ಮಾಹಿತಿಯನ್ನು ಅವರ ಕುಟುಂಬಸ್ಥರು ತಿಳಿಸಬೇಕು. ಆಗ ಅವರನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ತೆರೆದಿರುವ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 08226-223163, 08226-223161, 08226-223160 ಹಾಗೂ ಮೊಬೈಲ್ ಸಂಖ್ಯೆ 9740942901ಗೆ ಕರೆ ಮಾಡಿ ಮಾಹಿತಿ ತಿಳಿಸಲು ಕೋರಲಾಗಿದೆ.
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…