ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು.
ಶ್ರಾವಣ ಮಾಸದ ಕೊನೆಯ ಶನಿವಾರವಾದ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬೆಟ್ಟಕ್ಕೆ ತೆರಳಲು ಸುಮಾರು 25ಕ್ಕೂ ಅಧಿಕ ಬಸ್ಗಳನ್ನು ನಿಯೋಜನೆ ಮಾಡಲಾಗಿತ್ತು.
ಮೈಸೂರು, ಮಂಡ್ಯ, ಚಾಮರಾಜನನಗರ, ಹಾಸನ ಸೇರಿದಂತೆ ಕೇರಳ ಕಡೆಯಿಂದ ಸಾವಿರಾರು ಮಂದಿ ಸಾರ್ವಜನಿಕರು ಬೆಟ್ಟಕ್ಕೆ ಆಗಮಿಸಿದ್ದರು. ಬೆಳಿಗ್ಗೆ 10 ಗಂಟೆಯಿಂದಲೇ ಅಧಿಕ ಮಂದಿ ಭೇಟಿ ನೀಡಿದ್ದ ಕಾರಣ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕಿಲೋ ಮೀಟರ್ಗಟ್ಟಲೇ ಜನರು ಸಾಲುಗಟ್ಟಿ ನಿಲ್ಲುವಂತಾಯಿತು. ಬಳಿಕ ಟಿಕೆಟ್ ಖರೀದಿಸಿ ಬೆಟ್ಟಕ್ಕೆ ತೆರಳಿದರು.
12 ಗಂಟೆ ವೇಳೆಗೆ ದೇವಸ್ಥಾನದಲ್ಲಿ ಅಧಿಕ ಮಂದಿ ಆಗಮಿಸಿದ್ದ ಕಾರಣ ಜನಜಂಗುಳಿ ಏರ್ಪಟ್ಟಿತ್ತು. ಇದರಿಂದ ದೇವಸ್ಥಾನದ ಸುತ್ತಲೂ ಎರಡು ಸಾಲಿನಲ್ಲಿ ನಿಂತ ಸಾರ್ವಜನಿಕರು ಗಂಟೆಗಟ್ಟಲೇ ನಿಂತು ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.
ಇನ್ನು ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಗೋಪಾಲಸ್ವಾಮಿಗೆ ವಿವಿಧ ಬಗೆಯ ಹೂವು ಹಾಗೂ ತುಳಸಿಯಿಂದ ವಿಶೇಷ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…