ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು.
ಶ್ರಾವಣ ಮಾಸದ ಕೊನೆಯ ಶನಿವಾರವಾದ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬೆಟ್ಟಕ್ಕೆ ತೆರಳಲು ಸುಮಾರು 25ಕ್ಕೂ ಅಧಿಕ ಬಸ್ಗಳನ್ನು ನಿಯೋಜನೆ ಮಾಡಲಾಗಿತ್ತು.
ಮೈಸೂರು, ಮಂಡ್ಯ, ಚಾಮರಾಜನನಗರ, ಹಾಸನ ಸೇರಿದಂತೆ ಕೇರಳ ಕಡೆಯಿಂದ ಸಾವಿರಾರು ಮಂದಿ ಸಾರ್ವಜನಿಕರು ಬೆಟ್ಟಕ್ಕೆ ಆಗಮಿಸಿದ್ದರು. ಬೆಳಿಗ್ಗೆ 10 ಗಂಟೆಯಿಂದಲೇ ಅಧಿಕ ಮಂದಿ ಭೇಟಿ ನೀಡಿದ್ದ ಕಾರಣ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕಿಲೋ ಮೀಟರ್ಗಟ್ಟಲೇ ಜನರು ಸಾಲುಗಟ್ಟಿ ನಿಲ್ಲುವಂತಾಯಿತು. ಬಳಿಕ ಟಿಕೆಟ್ ಖರೀದಿಸಿ ಬೆಟ್ಟಕ್ಕೆ ತೆರಳಿದರು.
12 ಗಂಟೆ ವೇಳೆಗೆ ದೇವಸ್ಥಾನದಲ್ಲಿ ಅಧಿಕ ಮಂದಿ ಆಗಮಿಸಿದ್ದ ಕಾರಣ ಜನಜಂಗುಳಿ ಏರ್ಪಟ್ಟಿತ್ತು. ಇದರಿಂದ ದೇವಸ್ಥಾನದ ಸುತ್ತಲೂ ಎರಡು ಸಾಲಿನಲ್ಲಿ ನಿಂತ ಸಾರ್ವಜನಿಕರು ಗಂಟೆಗಟ್ಟಲೇ ನಿಂತು ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.
ಇನ್ನು ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಗೋಪಾಲಸ್ವಾಮಿಗೆ ವಿವಿಧ ಬಗೆಯ ಹೂವು ಹಾಗೂ ತುಳಸಿಯಿಂದ ವಿಶೇಷ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…