ಚಾಮರಾಜನಗರ

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಸೀರಗೊಡು ಗ್ರಾಮದ ರೈತ ವೆಂಕಟರಮಣ ಶೆಟ್ಟಿ ತನಗೆ ಸೇರಿದ ಆಡು ಮರಿಗಳನ್ನು ಮೇವು ಮೇಯಲು ಬಿಟ್ಟಿದ್ದ ಆದರೆ ಸಾಕಷ್ಟು ಸಮಯವಾದರೂ ಒಂದು ಆಡುಮರಿ ಬಾರದ ಹಿನ್ನಲೆ ಹುಡುಕಲು ತೆರಳಿದ್ದ ವೇಳೆ ಕಾಡು ಪ್ರಾಣಿಯಿಂದ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಆಡು ಮರಿ ಮೃತಪಟ್ಟಿದ್ದ ಸಮೀಪದ ಮರದ ಮೇಲೆ ಚಿರತೆ ಮರಿ ಇರುವುದನ್ನು ಗಮನಿಸಿದ್ದಾರೆ.

ಮರದ ಮೇಲೆ ಚಿರತೆ ಮರಿ ಕಂಡುಬಂದ ಹಿನ್ನೆಲೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಗ್ರಾಮಸ್ಥರು ಎಚ್ಚರಿಕೆಯಿಂದ ಮುನ್ನೆಚ್ಚರಿಕೆ ಕ್ರಮವಹಿಸಿ
ಸುಮಾರು ಎರಡು ಗಂಟೆಗಳ ಬಳಿಕ ಚಿರತೆ ಮರಿ ಮರದಿಂದ ಕೆಳಗೆ ಇಳಿದ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಅದನ್ನು ಯಾವುದೇ ಅಪಾಯವಾಗದಂತೆ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.

ಚಿರತೆ ಮರಿ ಸೆರೆ ಹಿಡಿಯುವಾಗ ಕೆಲವು ಯುವಕರಿಗೆ ಚಿರತೆ ಮರಿ ಪರಚಿದ ಹಿನ್ನೆಲೆ ಸಣ್ಣಪುಟ್ಟ ಗಾಯಗಳಾಗಿ ರಕ್ತಸ್ರಾವಾಗಿದೆ.

ಸಿರಗೋಡು ಗ್ರಾಮದ ವೆಂಕಟರಮಣ ಶೆಟ್ಟಿ ಎಂಬುವರ ಪಟ್ಟ ಜಮೀನಿನಲ್ಲಿ ಆಡುಮರಿಯ ಮೇಲೆ ಚಿರತೆ ದಾಳಿ ನಡೆಸಿ ಸಮೀಪದ ಮರದ ಮೇಲೆ ಇರುವುದನ್ನು ಗ್ರಾಮಸ್ಥರು ಮಾಹಿತಿ ನೀಡಿದ ತಕ್ಷಣ ಸ್ಥಳೀಯರ ಸಹಕಾರದಿಂದ ಚಿರತೆ ಸೆರೆಹಿಡಿಯಲಾಗಿದೆ. ತಾಯಿ ಚಿರತೆಯು ಸಂಜೆ ಆರರ ವೇಳೆ ಅರಣ್ಯ ಪ್ರದೇಶಕ್ಕೆ ಹೋಗಿರುವ ಬಗ್ಗೆ ಗ್ರಾಮಸ್ಥರೇ ಮಾಹಿತಿ ನೀಡಿದ್ದಾರೆ ಆದರೂ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

 

ವರದಿ : ಮಹದೇಶ್ ಎಂ.ಗೌಡ

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

10 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

13 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

13 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

13 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

13 hours ago