ಚಾಮರಾಜನಗರ

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಸೀರಗೊಡು ಗ್ರಾಮದ ರೈತ ವೆಂಕಟರಮಣ ಶೆಟ್ಟಿ ತನಗೆ ಸೇರಿದ ಆಡು ಮರಿಗಳನ್ನು ಮೇವು ಮೇಯಲು ಬಿಟ್ಟಿದ್ದ ಆದರೆ ಸಾಕಷ್ಟು ಸಮಯವಾದರೂ ಒಂದು ಆಡುಮರಿ ಬಾರದ ಹಿನ್ನಲೆ ಹುಡುಕಲು ತೆರಳಿದ್ದ ವೇಳೆ ಕಾಡು ಪ್ರಾಣಿಯಿಂದ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಆಡು ಮರಿ ಮೃತಪಟ್ಟಿದ್ದ ಸಮೀಪದ ಮರದ ಮೇಲೆ ಚಿರತೆ ಮರಿ ಇರುವುದನ್ನು ಗಮನಿಸಿದ್ದಾರೆ.

ಮರದ ಮೇಲೆ ಚಿರತೆ ಮರಿ ಕಂಡುಬಂದ ಹಿನ್ನೆಲೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಗ್ರಾಮಸ್ಥರು ಎಚ್ಚರಿಕೆಯಿಂದ ಮುನ್ನೆಚ್ಚರಿಕೆ ಕ್ರಮವಹಿಸಿ
ಸುಮಾರು ಎರಡು ಗಂಟೆಗಳ ಬಳಿಕ ಚಿರತೆ ಮರಿ ಮರದಿಂದ ಕೆಳಗೆ ಇಳಿದ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಅದನ್ನು ಯಾವುದೇ ಅಪಾಯವಾಗದಂತೆ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.

ಚಿರತೆ ಮರಿ ಸೆರೆ ಹಿಡಿಯುವಾಗ ಕೆಲವು ಯುವಕರಿಗೆ ಚಿರತೆ ಮರಿ ಪರಚಿದ ಹಿನ್ನೆಲೆ ಸಣ್ಣಪುಟ್ಟ ಗಾಯಗಳಾಗಿ ರಕ್ತಸ್ರಾವಾಗಿದೆ.

ಸಿರಗೋಡು ಗ್ರಾಮದ ವೆಂಕಟರಮಣ ಶೆಟ್ಟಿ ಎಂಬುವರ ಪಟ್ಟ ಜಮೀನಿನಲ್ಲಿ ಆಡುಮರಿಯ ಮೇಲೆ ಚಿರತೆ ದಾಳಿ ನಡೆಸಿ ಸಮೀಪದ ಮರದ ಮೇಲೆ ಇರುವುದನ್ನು ಗ್ರಾಮಸ್ಥರು ಮಾಹಿತಿ ನೀಡಿದ ತಕ್ಷಣ ಸ್ಥಳೀಯರ ಸಹಕಾರದಿಂದ ಚಿರತೆ ಸೆರೆಹಿಡಿಯಲಾಗಿದೆ. ತಾಯಿ ಚಿರತೆಯು ಸಂಜೆ ಆರರ ವೇಳೆ ಅರಣ್ಯ ಪ್ರದೇಶಕ್ಕೆ ಹೋಗಿರುವ ಬಗ್ಗೆ ಗ್ರಾಮಸ್ಥರೇ ಮಾಹಿತಿ ನೀಡಿದ್ದಾರೆ ಆದರೂ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

 

ವರದಿ : ಮಹದೇಶ್ ಎಂ.ಗೌಡ

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

18 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago