ಚಾಮರಾಜನಗರ

ಚಿರತೆ ದಾಳಿ : ಬಾಲಕನಿಗೆ ಗಂಭೀರ ಗಾಯ

ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ ನಡೆಸಿದೆ.

ಗ್ರಾಮದ ಶಿವಕುಮಾರ್ ಅವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ರಕ್ತಸಿಕ್ತನಾಗಿ ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯುವ ಪ್ರಯತ್ನ ರಾತ್ರಿ 10.30ರಲ್ಲಿ ನಡೆದಿತ್ತು.

ತನ್ನ ಮನೆಯಿಂದ ಇನ್ನೊಂದು ಮನೆಗೆ ಹೋಗುವಾಗ ರಾತ್ರಿ 8ಗಂಟೆ ಸುಮಾರಿನಲ್ಲಿ ದಾಳಿ ಮಾಡಿದ್ದು ಕುತ್ತಿಗೆ ಮತ್ತು ದೇಹದ ಭಾಗಗಳ ಮೇಲೆ ಬಾಲಕನಿಗೆ ಗಾಯಗಳಾಗಿವೆ.ಊರಲ್ಲೇ ಘಟನೆ ಸಂಭವಿಸಿರುವುದು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.

ಎಸಿಎಫ್ ಸುರೇಶ್ ಕುಮಾರ್, ಆರ್ ಎಫ್ ಒ ಲೋಕೇಶ್ ಮೂರ್ತಿ ಮತ್ತು ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು ಅವರು ಹೇಳುವ ಪ್ರಕಾರ ಬಾಲಕ ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಶನಿವಾರ ರಾತ್ರಿ ಇದೇ ಗ್ರಾಮದ ಸುಬ್ಬಣ್ಣ ಅವರ ನಾಯಿ ಮತ್ತು ನೆರೆಯ ಗ್ರಾಮವಾದ ಕೆಸ್ತೂರು ಗೋವಿಂದ ಶೆಟ್ಟಿ ಅವರ ಜಾನುವಾರು ಮೇಲೆ ದಾಳಿ ಮಾಡಿತ್ತು.ಭಾನುವಾರವೂ ಅದರ ಜಾಡು ಕಂಡು ಬಂದಿತ್ತು.ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ 2ಕಡೆ ಬೋನು ಇಡಲಾಗಿತ್ತು.

ಡ್ರೋಣ್ ಬಳಸಿ ಇದರ ಸೆರೆ ಹಿಡಿಯುವ ಪ್ರಯತ್ನ ಸಾಗಿತ್ತಾದರೂ ಈಗ ಅರಿವಳಿಕೆ ನೀಡಿ ಹಿಡಿಯಲು ಪಿಎಸಿಸಿಎಫ್ (ವನ್ಯಜೀವಿ) ಇವರಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.ಇತ್ತೀಚೆಗೆ ಹನೂರು ತಾಲ್ಲೂಕಿನಲ್ಲಿ ಬಾಲಕನೊಬ್ಬ ಚಿರತೆ ದಾಳಿಯಿಂದ ಮೃತಪಟ್ಟಿದ್ದ.ಅದೇ ಚಿರತೆಯೇ ಈಗ ಮಲ್ಲಿಗೆಹಳ್ಳಿ ಬಾಲಕನ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ.ಇಲಾಖೆ ಸಿಬ್ಬಂದಿ ಅದರ ಸೆರೆಗೆ ಕಾರ್ಯಾಚರಣೆಗೆ ಇಳಿದ ಮೇಲೆ ಹನೂರು ಕಡೆಯಿಂದ ಇತ್ತ ಬಂದಿದೆ ಎಂದು ಹೇಳಲಾಗುತ್ತಿದೆ.

lokesh

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

20 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

41 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

2 hours ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

3 hours ago