ಚಾಮರಾಜನಗರ

ಚಿರತೆ ದಾಳಿ : ಬಾಲಕನಿಗೆ ಗಂಭೀರ ಗಾಯ

ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ ನಡೆಸಿದೆ.

ಗ್ರಾಮದ ಶಿವಕುಮಾರ್ ಅವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ರಕ್ತಸಿಕ್ತನಾಗಿ ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯುವ ಪ್ರಯತ್ನ ರಾತ್ರಿ 10.30ರಲ್ಲಿ ನಡೆದಿತ್ತು.

ತನ್ನ ಮನೆಯಿಂದ ಇನ್ನೊಂದು ಮನೆಗೆ ಹೋಗುವಾಗ ರಾತ್ರಿ 8ಗಂಟೆ ಸುಮಾರಿನಲ್ಲಿ ದಾಳಿ ಮಾಡಿದ್ದು ಕುತ್ತಿಗೆ ಮತ್ತು ದೇಹದ ಭಾಗಗಳ ಮೇಲೆ ಬಾಲಕನಿಗೆ ಗಾಯಗಳಾಗಿವೆ.ಊರಲ್ಲೇ ಘಟನೆ ಸಂಭವಿಸಿರುವುದು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.

ಎಸಿಎಫ್ ಸುರೇಶ್ ಕುಮಾರ್, ಆರ್ ಎಫ್ ಒ ಲೋಕೇಶ್ ಮೂರ್ತಿ ಮತ್ತು ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು ಅವರು ಹೇಳುವ ಪ್ರಕಾರ ಬಾಲಕ ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಶನಿವಾರ ರಾತ್ರಿ ಇದೇ ಗ್ರಾಮದ ಸುಬ್ಬಣ್ಣ ಅವರ ನಾಯಿ ಮತ್ತು ನೆರೆಯ ಗ್ರಾಮವಾದ ಕೆಸ್ತೂರು ಗೋವಿಂದ ಶೆಟ್ಟಿ ಅವರ ಜಾನುವಾರು ಮೇಲೆ ದಾಳಿ ಮಾಡಿತ್ತು.ಭಾನುವಾರವೂ ಅದರ ಜಾಡು ಕಂಡು ಬಂದಿತ್ತು.ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ 2ಕಡೆ ಬೋನು ಇಡಲಾಗಿತ್ತು.

ಡ್ರೋಣ್ ಬಳಸಿ ಇದರ ಸೆರೆ ಹಿಡಿಯುವ ಪ್ರಯತ್ನ ಸಾಗಿತ್ತಾದರೂ ಈಗ ಅರಿವಳಿಕೆ ನೀಡಿ ಹಿಡಿಯಲು ಪಿಎಸಿಸಿಎಫ್ (ವನ್ಯಜೀವಿ) ಇವರಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.ಇತ್ತೀಚೆಗೆ ಹನೂರು ತಾಲ್ಲೂಕಿನಲ್ಲಿ ಬಾಲಕನೊಬ್ಬ ಚಿರತೆ ದಾಳಿಯಿಂದ ಮೃತಪಟ್ಟಿದ್ದ.ಅದೇ ಚಿರತೆಯೇ ಈಗ ಮಲ್ಲಿಗೆಹಳ್ಳಿ ಬಾಲಕನ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ.ಇಲಾಖೆ ಸಿಬ್ಬಂದಿ ಅದರ ಸೆರೆಗೆ ಕಾರ್ಯಾಚರಣೆಗೆ ಇಳಿದ ಮೇಲೆ ಹನೂರು ಕಡೆಯಿಂದ ಇತ್ತ ಬಂದಿದೆ ಎಂದು ಹೇಳಲಾಗುತ್ತಿದೆ.

lokesh

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

3 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

6 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

6 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

6 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

6 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

7 hours ago