ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ ನಡೆಸಿದೆ.
ಗ್ರಾಮದ ಶಿವಕುಮಾರ್ ಅವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ರಕ್ತಸಿಕ್ತನಾಗಿ ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯುವ ಪ್ರಯತ್ನ ರಾತ್ರಿ 10.30ರಲ್ಲಿ ನಡೆದಿತ್ತು.
ತನ್ನ ಮನೆಯಿಂದ ಇನ್ನೊಂದು ಮನೆಗೆ ಹೋಗುವಾಗ ರಾತ್ರಿ 8ಗಂಟೆ ಸುಮಾರಿನಲ್ಲಿ ದಾಳಿ ಮಾಡಿದ್ದು ಕುತ್ತಿಗೆ ಮತ್ತು ದೇಹದ ಭಾಗಗಳ ಮೇಲೆ ಬಾಲಕನಿಗೆ ಗಾಯಗಳಾಗಿವೆ.ಊರಲ್ಲೇ ಘಟನೆ ಸಂಭವಿಸಿರುವುದು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.
ಎಸಿಎಫ್ ಸುರೇಶ್ ಕುಮಾರ್, ಆರ್ ಎಫ್ ಒ ಲೋಕೇಶ್ ಮೂರ್ತಿ ಮತ್ತು ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು ಅವರು ಹೇಳುವ ಪ್ರಕಾರ ಬಾಲಕ ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಶನಿವಾರ ರಾತ್ರಿ ಇದೇ ಗ್ರಾಮದ ಸುಬ್ಬಣ್ಣ ಅವರ ನಾಯಿ ಮತ್ತು ನೆರೆಯ ಗ್ರಾಮವಾದ ಕೆಸ್ತೂರು ಗೋವಿಂದ ಶೆಟ್ಟಿ ಅವರ ಜಾನುವಾರು ಮೇಲೆ ದಾಳಿ ಮಾಡಿತ್ತು.ಭಾನುವಾರವೂ ಅದರ ಜಾಡು ಕಂಡು ಬಂದಿತ್ತು.ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ 2ಕಡೆ ಬೋನು ಇಡಲಾಗಿತ್ತು.
ಡ್ರೋಣ್ ಬಳಸಿ ಇದರ ಸೆರೆ ಹಿಡಿಯುವ ಪ್ರಯತ್ನ ಸಾಗಿತ್ತಾದರೂ ಈಗ ಅರಿವಳಿಕೆ ನೀಡಿ ಹಿಡಿಯಲು ಪಿಎಸಿಸಿಎಫ್ (ವನ್ಯಜೀವಿ) ಇವರಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.ಇತ್ತೀಚೆಗೆ ಹನೂರು ತಾಲ್ಲೂಕಿನಲ್ಲಿ ಬಾಲಕನೊಬ್ಬ ಚಿರತೆ ದಾಳಿಯಿಂದ ಮೃತಪಟ್ಟಿದ್ದ.ಅದೇ ಚಿರತೆಯೇ ಈಗ ಮಲ್ಲಿಗೆಹಳ್ಳಿ ಬಾಲಕನ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ.ಇಲಾಖೆ ಸಿಬ್ಬಂದಿ ಅದರ ಸೆರೆಗೆ ಕಾರ್ಯಾಚರಣೆಗೆ ಇಳಿದ ಮೇಲೆ ಹನೂರು ಕಡೆಯಿಂದ ಇತ್ತ ಬಂದಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…