ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ ಅಪ್ಪಿ ಕುಳಿ ಬಳಿ ಗುರುವಾರ ತಡರಾತ್ರಿ ಜರುಗಿದೆ.
ರಾಮಾಪುರ ಗ್ರಾಮದ ಕಂದ ಎಂಬ ರೈತನೇ ಹಸು ಕಳೆದುಕೊಂಡ ರೈತನಾಗಿದ್ದಾರೆ.
ಘಟನೆ ವಿವರ: ರಾಮಾಪುರ ಭಾಗದಲ್ಲಿ ಹಸುಗಳನ್ನು ಮೇಯಿಸಲು ಕಾಡಿನಲ್ಲಿ ಬಿಟ್ಟು ಬರುವುದು ವಾಡಿಕೆ. ಹಾಗೆಯೇ ಹಸುಗಳು ಮರಳಿ ಸಂಜೆ ವೇಳೆ ಬರುವ ವೇಳೆಗೆ ಜಮೀನಿನ ಸಮೀಪದಲ್ಲಿ ಹಸು ಮೇಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ತಿಂದು ಹಾಕಿದೆ. ಹೀಗಾಗಿ ರೈತ ಕಂದನಿಗೆ ಸಾವಿರಾರು ರೂ ನಷ್ಟ ಉಂಟಾಗಿದೆ.
ಚಿರತೆ ದಾಳಿ ಮೊದಲಲ್ಲ: ಈ ಭಾಗದಲ್ಲಿ ಆಗಿಂದಾಗೆ ಚಿರತೆ ದಾಳಿ ಮಾಡುತ್ತಿದ್ದೂ ಸಾಕು ಪ್ರಾಣಿಗಳಾದ ನಾಯಿ, ಮೇಕೆ ಕುರಿ ತಿನ್ನುತ್ತಿದೆ. ಹಾಗಾಗಿ ಚಿರತೆ ದಾಳಿ ಈ ಭಾಗದಲ್ಲಿ ಮಿತಿ ಮೀರಿದ್ದು ತೋಟದ ಮನೆಗಳ ಜನರು ಭಯ ಭೀತರಾಗಿದ್ದಾರೆ. ಹಾಗಾಗಿ ಚಿರತೆ ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡಿ ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಪರಿಹಾರ ನೀಡಿ: ಸುಮಾರು 30 ಸಾವಿರ ರೂ ಬೆಲೆ ಬಾಳುವ ಹಸುವನ್ನು ಕಳೆದುಕೊಂಡ ರೈತ ಸಾಲದ ಸುಳಿಯಲ್ಲಿ ಸಿಲುಕಿದಂತಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಪರಿಹಾರ ನೀಡಬೇಕು ಎಂದು ರೈತ ಕಂದ ಆಗ್ರಹ ಮಾಡಿದ್ದಾರೆ.
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…