ಚಾಮರಾಜನಗರ

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ ಅಪ್ಪಿ ಕುಳಿ ಬಳಿ ಗುರುವಾರ ತಡರಾತ್ರಿ ಜರುಗಿದೆ.

ರಾಮಾಪುರ ಗ್ರಾಮದ ಕಂದ ಎಂಬ ರೈತನೇ ಹಸು ಕಳೆದುಕೊಂಡ ರೈತನಾಗಿದ್ದಾರೆ.

ಘಟನೆ ವಿವರ: ರಾಮಾಪುರ ಭಾಗದಲ್ಲಿ ಹಸುಗಳನ್ನು ಮೇಯಿಸಲು ಕಾಡಿನಲ್ಲಿ ಬಿಟ್ಟು ಬರುವುದು ವಾಡಿಕೆ. ಹಾಗೆಯೇ ಹಸುಗಳು ಮರಳಿ ಸಂಜೆ ವೇಳೆ ಬರುವ ವೇಳೆಗೆ ಜಮೀನಿನ ಸಮೀಪದಲ್ಲಿ ಹಸು ಮೇಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ತಿಂದು ಹಾಕಿದೆ. ಹೀಗಾಗಿ ರೈತ ಕಂದನಿಗೆ ಸಾವಿರಾರು ರೂ ನಷ್ಟ ಉಂಟಾಗಿದೆ.

ಚಿರತೆ ದಾಳಿ ಮೊದಲಲ್ಲ: ಈ ಭಾಗದಲ್ಲಿ ಆಗಿಂದಾಗೆ ಚಿರತೆ ದಾಳಿ ಮಾಡುತ್ತಿದ್ದೂ ಸಾಕು ಪ್ರಾಣಿಗಳಾದ ನಾಯಿ, ಮೇಕೆ ಕುರಿ ತಿನ್ನುತ್ತಿದೆ. ಹಾಗಾಗಿ ಚಿರತೆ ದಾಳಿ ಈ ಭಾಗದಲ್ಲಿ ಮಿತಿ ಮೀರಿದ್ದು ತೋಟದ ಮನೆಗಳ ಜನರು ಭಯ ಭೀತರಾಗಿದ್ದಾರೆ. ಹಾಗಾಗಿ ಚಿರತೆ ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡಿ ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಪರಿಹಾರ ನೀಡಿ: ಸುಮಾರು 30 ಸಾವಿರ ರೂ ಬೆಲೆ ಬಾಳುವ ಹಸುವನ್ನು ಕಳೆದುಕೊಂಡ ರೈತ ಸಾಲದ ಸುಳಿಯಲ್ಲಿ ಸಿಲುಕಿದಂತಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಪರಿಹಾರ ನೀಡಬೇಕು ಎಂದು ರೈತ ಕಂದ ಆಗ್ರಹ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

12 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

12 hours ago