ಚಾಮರಾಜನಗರ

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ ಅಪ್ಪಿ ಕುಳಿ ಬಳಿ ಗುರುವಾರ ತಡರಾತ್ರಿ ಜರುಗಿದೆ.

ರಾಮಾಪುರ ಗ್ರಾಮದ ಕಂದ ಎಂಬ ರೈತನೇ ಹಸು ಕಳೆದುಕೊಂಡ ರೈತನಾಗಿದ್ದಾರೆ.

ಘಟನೆ ವಿವರ: ರಾಮಾಪುರ ಭಾಗದಲ್ಲಿ ಹಸುಗಳನ್ನು ಮೇಯಿಸಲು ಕಾಡಿನಲ್ಲಿ ಬಿಟ್ಟು ಬರುವುದು ವಾಡಿಕೆ. ಹಾಗೆಯೇ ಹಸುಗಳು ಮರಳಿ ಸಂಜೆ ವೇಳೆ ಬರುವ ವೇಳೆಗೆ ಜಮೀನಿನ ಸಮೀಪದಲ್ಲಿ ಹಸು ಮೇಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ತಿಂದು ಹಾಕಿದೆ. ಹೀಗಾಗಿ ರೈತ ಕಂದನಿಗೆ ಸಾವಿರಾರು ರೂ ನಷ್ಟ ಉಂಟಾಗಿದೆ.

ಚಿರತೆ ದಾಳಿ ಮೊದಲಲ್ಲ: ಈ ಭಾಗದಲ್ಲಿ ಆಗಿಂದಾಗೆ ಚಿರತೆ ದಾಳಿ ಮಾಡುತ್ತಿದ್ದೂ ಸಾಕು ಪ್ರಾಣಿಗಳಾದ ನಾಯಿ, ಮೇಕೆ ಕುರಿ ತಿನ್ನುತ್ತಿದೆ. ಹಾಗಾಗಿ ಚಿರತೆ ದಾಳಿ ಈ ಭಾಗದಲ್ಲಿ ಮಿತಿ ಮೀರಿದ್ದು ತೋಟದ ಮನೆಗಳ ಜನರು ಭಯ ಭೀತರಾಗಿದ್ದಾರೆ. ಹಾಗಾಗಿ ಚಿರತೆ ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡಿ ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಪರಿಹಾರ ನೀಡಿ: ಸುಮಾರು 30 ಸಾವಿರ ರೂ ಬೆಲೆ ಬಾಳುವ ಹಸುವನ್ನು ಕಳೆದುಕೊಂಡ ರೈತ ಸಾಲದ ಸುಳಿಯಲ್ಲಿ ಸಿಲುಕಿದಂತಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಪರಿಹಾರ ನೀಡಬೇಕು ಎಂದು ರೈತ ಕಂದ ಆಗ್ರಹ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

48 mins ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

57 mins ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

2 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 hours ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago