ಚಾಮರಾಜನಗರ

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ.

ಗ್ರಾಮದ ರಾಮಯ್ಯ ಎಂಬುವರು ಕರುಗಳು ಮೃತಪಟ್ಟಿವೆ. ಇವರು ತಮ್ಮ ಮನೆಯ ಹಿಂಭಾಗದ ಜಮೀನಿನ ಕೊಟ್ಟಿಗೆಯಲ್ಲಿ ಪ್ರತಿದಿನ 5 ಹಸುಗಳು ಹಾಗೂ 4 ಕರುಗಳ ಸೇರಿದಂತೆ 9 ರಾಸುಗಳನ್ನು ಕಟ್ಟಿ ಹಾಕುತ್ತಿದೆ.
ಶನಿವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ 4 ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ. 1 ಕರುವಿಗೆ ಗಾಯವಾಗಿದೆ. ಭಾನುವಾರ ಮುಂಜಾನೆ ಹಾಲು ಕರೆಯಲು ಕೊಟ್ಟಿಗೆಗೆ ಬಂದಾಗ ಕರುಗಳು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಬಳಿ 2 ತಿಂಗಳ ಹಿಂದೆ 2 ಹಸು ಹಾಗೂ ಕುರಿ ಮರಿಗಳ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಮೃತಪಟ್ಟಿದವು. ಅರಣ್ಯ ಇಲಾಖೆ ವತಿಯಿಂದ ಇಲ್ಲಿಯ ವರೆಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.

ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಂತೆ ಅರಣ್ಯ ಅಽಕಾರಿಗಳು ಗ್ರಾಮದಲ್ಲಿ ಚಿರತೆ ಬೋನು ಇರಿಸಿ ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಅರಣ್ಯ ಇಲಾಖೆ ಸಿಬ್ಬಂದಿ, ಕರುಗಳು ಮೃತಪಟ್ಟಿರುವ ಸ್ಥಳದಲ್ಲೇ ಡ್ರೋನ್ ಕ್ಯಾಮೆರಾ ಬಳಸಿದರೂ ದಾಳಿ ಮಾಡಿದ ಪ್ರಾಣಿಯು ಪತ್ತೆಯಾಗಲಿಲ್ಲ.

ಈ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಚಿರತೆ ದಾಳಿಯಿಂದ ಮೃತಪಟ್ಟಿರುವ ಕರುಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಮಾಲೀಕರಿಂದ ದಾಖಲಾತಿ ಪಡೆದುಕೊಂಡು ಚೆಕ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕರುಗಳ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮಾಲೀಕರಿಂದ ದಾಖಲಾತಿ ಪಡೆದುಕೊಂಡು ಆನ್‌ಲೈನ್ ಮೂಲಕ ಮಾಲೀಕರ ಖಾತೆ ನೇರವಾಗಿ ಪರಿಹಾರ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕರಾದ ಶ್ರೀಪತಿ, ಎಸಿಎಫ್ ಪ್ರಕಾಶ್‌ಅಕ್ಷಯ್, ಆರ್‌ಎಫ್‌ಒ ಸತೀಶ್, ಡಿಆರ್‌ಎಫ್‌ಒಗಳಾದ ಲಕ್ಷ ಣ್, ಮಧು, ಗ್ರಾ.ಪಂ.ಅಧ್ಯಕ್ಷ ವಸಂತಕುಮಾರ್, ಆರಾಧನ ಸಮಿತಿ ಸದಸ್ಯ ಮಸಣಾಪುರ ಶಿವನಂಜಯ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಲ್ಕೆರೆ ಅಗ್ರಹಾರ ರೇವಣ್ಣ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago