ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ.
ಗ್ರಾಮದ ರಾಮಯ್ಯ ಎಂಬುವರು ಕರುಗಳು ಮೃತಪಟ್ಟಿವೆ. ಇವರು ತಮ್ಮ ಮನೆಯ ಹಿಂಭಾಗದ ಜಮೀನಿನ ಕೊಟ್ಟಿಗೆಯಲ್ಲಿ ಪ್ರತಿದಿನ 5 ಹಸುಗಳು ಹಾಗೂ 4 ಕರುಗಳ ಸೇರಿದಂತೆ 9 ರಾಸುಗಳನ್ನು ಕಟ್ಟಿ ಹಾಕುತ್ತಿದೆ.
ಶನಿವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ 4 ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ. 1 ಕರುವಿಗೆ ಗಾಯವಾಗಿದೆ. ಭಾನುವಾರ ಮುಂಜಾನೆ ಹಾಲು ಕರೆಯಲು ಕೊಟ್ಟಿಗೆಗೆ ಬಂದಾಗ ಕರುಗಳು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಬಳಿ 2 ತಿಂಗಳ ಹಿಂದೆ 2 ಹಸು ಹಾಗೂ ಕುರಿ ಮರಿಗಳ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಮೃತಪಟ್ಟಿದವು. ಅರಣ್ಯ ಇಲಾಖೆ ವತಿಯಿಂದ ಇಲ್ಲಿಯ ವರೆಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.
ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಂತೆ ಅರಣ್ಯ ಅಽಕಾರಿಗಳು ಗ್ರಾಮದಲ್ಲಿ ಚಿರತೆ ಬೋನು ಇರಿಸಿ ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಅರಣ್ಯ ಇಲಾಖೆ ಸಿಬ್ಬಂದಿ, ಕರುಗಳು ಮೃತಪಟ್ಟಿರುವ ಸ್ಥಳದಲ್ಲೇ ಡ್ರೋನ್ ಕ್ಯಾಮೆರಾ ಬಳಸಿದರೂ ದಾಳಿ ಮಾಡಿದ ಪ್ರಾಣಿಯು ಪತ್ತೆಯಾಗಲಿಲ್ಲ.
ಈ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಚಿರತೆ ದಾಳಿಯಿಂದ ಮೃತಪಟ್ಟಿರುವ ಕರುಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಮಾಲೀಕರಿಂದ ದಾಖಲಾತಿ ಪಡೆದುಕೊಂಡು ಚೆಕ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕರುಗಳ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮಾಲೀಕರಿಂದ ದಾಖಲಾತಿ ಪಡೆದುಕೊಂಡು ಆನ್ಲೈನ್ ಮೂಲಕ ಮಾಲೀಕರ ಖಾತೆ ನೇರವಾಗಿ ಪರಿಹಾರ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕರಾದ ಶ್ರೀಪತಿ, ಎಸಿಎಫ್ ಪ್ರಕಾಶ್ಅಕ್ಷಯ್, ಆರ್ಎಫ್ಒ ಸತೀಶ್, ಡಿಆರ್ಎಫ್ಒಗಳಾದ ಲಕ್ಷ ಣ್, ಮಧು, ಗ್ರಾ.ಪಂ.ಅಧ್ಯಕ್ಷ ವಸಂತಕುಮಾರ್, ಆರಾಧನ ಸಮಿತಿ ಸದಸ್ಯ ಮಸಣಾಪುರ ಶಿವನಂಜಯ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಲ್ಕೆರೆ ಅಗ್ರಹಾರ ರೇವಣ್ಣ ಹಾಜರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…