ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಗೆ ಸುಮಾರು 10 ದಿನಗಳು ಕಳೆದರೂ ಚಿರತೆ ಇನ್ನೂ ಸೆರೆಯಾಗಿಲ್ಲ. ಈ ನಡುವೆ ನಾಗಮಲೆ ಗ್ರಾಮದ ಈರಣ್ಣ ಎಂಬುವರಿಗೆ ಸೇರಿದ ಮೇಕೆಯ ಮೇಲೆ ತಡರಾತ್ರಿ ಚಿರತೆ ದಾಳಿ ನಡೆಸಿರುವ ಘಟನೆ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಮೇಕೆಯ ಮೇಲಿನ ದಾಳಿಯನ್ನು ಗಮನಿಸಿದ ಸ್ಥಳೀಯರು ಜೋರಾಗಿ ಕೂಗಾಡುತ್ತಿದ್ದಂತೆ ಚಿರತೆ ಅಲ್ಲಿಂದ ಪರಾರಿಯಾಗಿದೆ. ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬಲೆ ಹಾಗೂ ಕ್ಯಾಮೆರಾಗಳನ್ನು ಅಳವಡಿಸಿ ಕಾರ್ಯಾಚರಣೆ ಮುಂದುವರಿಸಿದ್ದರೂ, ಚಿರತೆ ಸೆರೆಗೆ ಸಿಕ್ಕಿಲ್ಲ ಎಂಬುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ಸ್ಥಳೀಯರು ಮಾತನಾಡಿ, “ಗ್ರಾಮದ ಜನರು ಭಯಭೀತರಾಗಿದ್ದು, ರಾತ್ರಿ ವೇಳೆ ಹೊರಗೆ ಸಂಚರಿಸಲು ಹೆದರುತ್ತಿದ್ದಾರೆ. ಚಿರತೆಯನ್ನು ಶೀಘ್ರ ಸೆರೆಹಿಡಿದು ಗ್ರಾಮಸ್ಥರಿಗೆ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…