leopard
ಚಾಮರಾಜನಗರ : ತಾಲ್ಲೂಕಿನ ಕುದೇರು – ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ ಹೂಡಿದ್ದ ಚಿರತೆಯು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೆಗ್ಗವಾಡಿ, ಕುದೇರು, ದೇಮಹಳ್ಳಿ, ತೊರವಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ನಾಯಿಗಳು, ಕರುಗಳನ್ನು ತಿಂದು ಹಾಕಿತ್ತು.
ಈ ಚಿರತೆಯು ಅಡ್ಡಾಡುತ್ತಿದ್ದರಿಂದ 4 ಗ್ರಾಮಗಳ ಜನರು ತಮ್ಮ ತೋಟದ ಜಮೀನುಗಳಿಗೆ ಹೋಗಿ ಬರಲು ಭಯಪಡುತ್ತಿದ್ದರು. ಈ ಬಗ್ಗೆ ಜನರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಬೋನು ಇಟ್ಟು ಸೆರೆಗೆ ಯತ್ನಿಸಿದ್ದರು.
ಶುಕ್ರವಾರ ರಾತ್ರಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ತಿನ್ನಲು ಬಂದು ಸೆರೆಯಾಗಿದೆ. ಅರಣ್ಯಾಧಿಕಾರಿಗಳು ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…