leopard
ಚಾಮರಾಜನಗರ : ತಾಲ್ಲೂಕಿನ ಕುದೇರು – ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ ಹೂಡಿದ್ದ ಚಿರತೆಯು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೆಗ್ಗವಾಡಿ, ಕುದೇರು, ದೇಮಹಳ್ಳಿ, ತೊರವಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ನಾಯಿಗಳು, ಕರುಗಳನ್ನು ತಿಂದು ಹಾಕಿತ್ತು.
ಈ ಚಿರತೆಯು ಅಡ್ಡಾಡುತ್ತಿದ್ದರಿಂದ 4 ಗ್ರಾಮಗಳ ಜನರು ತಮ್ಮ ತೋಟದ ಜಮೀನುಗಳಿಗೆ ಹೋಗಿ ಬರಲು ಭಯಪಡುತ್ತಿದ್ದರು. ಈ ಬಗ್ಗೆ ಜನರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಬೋನು ಇಟ್ಟು ಸೆರೆಗೆ ಯತ್ನಿಸಿದ್ದರು.
ಶುಕ್ರವಾರ ರಾತ್ರಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ತಿನ್ನಲು ಬಂದು ಸೆರೆಯಾಗಿದೆ. ಅರಣ್ಯಾಧಿಕಾರಿಗಳು ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…