leopard
ಚಾಮರಾಜನಗರ : ತಾಲ್ಲೂಕಿನ ಕುದೇರು – ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ ಹೂಡಿದ್ದ ಚಿರತೆಯು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೆಗ್ಗವಾಡಿ, ಕುದೇರು, ದೇಮಹಳ್ಳಿ, ತೊರವಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ನಾಯಿಗಳು, ಕರುಗಳನ್ನು ತಿಂದು ಹಾಕಿತ್ತು.
ಈ ಚಿರತೆಯು ಅಡ್ಡಾಡುತ್ತಿದ್ದರಿಂದ 4 ಗ್ರಾಮಗಳ ಜನರು ತಮ್ಮ ತೋಟದ ಜಮೀನುಗಳಿಗೆ ಹೋಗಿ ಬರಲು ಭಯಪಡುತ್ತಿದ್ದರು. ಈ ಬಗ್ಗೆ ಜನರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಬೋನು ಇಟ್ಟು ಸೆರೆಗೆ ಯತ್ನಿಸಿದ್ದರು.
ಶುಕ್ರವಾರ ರಾತ್ರಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ತಿನ್ನಲು ಬಂದು ಸೆರೆಯಾಗಿದೆ. ಅರಣ್ಯಾಧಿಕಾರಿಗಳು ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…