ಚಾಮರಾಜನಗರ

ಹುಲಿಗಳ ಸಾವಿನ ಬಳಿಕ ಚಿರತೆ ಸಾವು : ಸಾಮಾಜಿಕ ಕಾರ್ಯಕರ್ತ ಗಂಭೀರ ಆರೋಪ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣದ ಬಳಿಕ ಚಿರತೆ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ವಲಯದ ತಿಮ್ಮರಾಯನಕೊಂಚಲು ಅರಣ್ಯದಲ್ಲಿ ಜೂ.5 ರಂದು ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ. ಆದರೆ, ಇದರ ಮರಣೋತ್ತರ ಪರೀಕ್ಷೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗಂಭೀರ ಆರೋಪ ಮಾಡಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಾಧಿಕಾರಿಗೆ ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಕೊಟ್ಟು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ‌.

ಈ ಬಗ್ಗೆ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಜೂನ್ 5 ರಂದು ಕೌದಳ್ಳಿ ಶಾಖೆಯ ಬಿದರಹಳ್ಳಿ ಬೀಟ್ ನಲ್ಲಿ ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ‌‌. NTCA ಮಾರ್ಗಸೂಚಿ ಅನ್ವಯ ಚಿರತೆ ಶವ ಪರೀಕ್ಷೆಯು ಎನ್ ಜಿಒ ಸದಸ್ಯರ ಹಾಜರಿ, ತಜ್ಞರ ಸಮ್ಮುಖದಲ್ಲಿ ನಡೆಯಬೇಕಿತ್ತು. ಆದರೆ, ಇದಾಗಿಲ್ಲ, ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಚಿರತೆ ಸಾವನ್ನು ಮುಚ್ಚಿಡುವ ಯತ್ನ ಮಾಡಿರುವ ಶಂಕೆ ಇದ್ದು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು‌.

ಆಂದೋಲನ ಡೆಸ್ಕ್

Recent Posts

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

17 mins ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

49 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

58 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

1 hour ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

2 hours ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

2 hours ago