ಚಾಮರಾಜನಗರ

ಹುಲಿಗಳ ಸಾವಿನ ಬಳಿಕ ಚಿರತೆ ಸಾವು : ಸಾಮಾಜಿಕ ಕಾರ್ಯಕರ್ತ ಗಂಭೀರ ಆರೋಪ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣದ ಬಳಿಕ ಚಿರತೆ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ವಲಯದ ತಿಮ್ಮರಾಯನಕೊಂಚಲು ಅರಣ್ಯದಲ್ಲಿ ಜೂ.5 ರಂದು ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ. ಆದರೆ, ಇದರ ಮರಣೋತ್ತರ ಪರೀಕ್ಷೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗಂಭೀರ ಆರೋಪ ಮಾಡಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಾಧಿಕಾರಿಗೆ ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಕೊಟ್ಟು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ‌.

ಈ ಬಗ್ಗೆ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಜೂನ್ 5 ರಂದು ಕೌದಳ್ಳಿ ಶಾಖೆಯ ಬಿದರಹಳ್ಳಿ ಬೀಟ್ ನಲ್ಲಿ ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ‌‌. NTCA ಮಾರ್ಗಸೂಚಿ ಅನ್ವಯ ಚಿರತೆ ಶವ ಪರೀಕ್ಷೆಯು ಎನ್ ಜಿಒ ಸದಸ್ಯರ ಹಾಜರಿ, ತಜ್ಞರ ಸಮ್ಮುಖದಲ್ಲಿ ನಡೆಯಬೇಕಿತ್ತು. ಆದರೆ, ಇದಾಗಿಲ್ಲ, ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಚಿರತೆ ಸಾವನ್ನು ಮುಚ್ಚಿಡುವ ಯತ್ನ ಮಾಡಿರುವ ಶಂಕೆ ಇದ್ದು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು‌.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago