ಚಾಮರಾಜನಗರ

ಚಿರತೆ ಸಾವು : ವಿಷಪ್ರಶಾನ ಶಂಕೆ

ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ.

ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ 5 ಹುಲಿಗಳು ಮೃತಪಟ್ಟ ಘಟನೆ ಹಸಿರಿರುವಾಗಲೇ ಚಿರತೆ ಸತ್ತಿರುವುದು ಬೆಳಕಿಗೆ ಬಂದಿದೆ.

ಕ್ವಾರಿ ಸಮೀಪದ ಕಲ್ಲಿನ ಮೇಲೆ 5-6 ವರ್ಷ ವಯಸ್ಸಿನ ಗಂಡು ಚಿರತೆಯ ಕಳೇಬರ ಪತ್ತೆಯಾಗಿದ್ದು ಎರಡು ಮೂರು ದಿನಗಳ ಹಿಂದೆ ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಚಿರತೆ ಕಳೇಬರ ಪತ್ತೆಯಾಗಿರುವ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಕಳೇಬರ ಕೂಡ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಗುರುವಾರ ಸಂಜೆ ಚಿರತೆಯ ಕಳೇಬರವನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಆರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಂಡಿಪುರದ ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.

ಪಶು ವೈದ್ಯರಾದ ಡಾ.ವಾಸಿಂ, ಡಾ.ಮೂರ್ತಿ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಚಿರತೆಯ ಕಳೇಬರವನ್ನು ಸುಡಲಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಚಾಮರಾಜನಗರ ಅರಣ್ಯ ವೃತ್ತದ ಸಿಸಿಎಫ್ ಹೀರಾಲಾಲ್, ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕ ಶ್ರೀಪತಿ, ಎಸಿಎಫ್ ಮಂಜುನಾಥ್, ಪ್ರಾದೇಶಿಕ ಆರಣ್ಯ ವಲಯದ ಆರ್‌ಎಫ್ ಸಂದೀಪ್, ಡಿಆರ್‌ಎಫ್ ಅಮರನಾಥ್, ಸುರೇಶ್, ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

46 mins ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

1 hour ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

1 hour ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

2 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

2 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

3 hours ago