Mysore
20
broken clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ ಒಂದು ಚಿರತೆ ಅದರ ಎರಡು ಚಿರತೆ ಮರಿಗಳ ಜತೆ ಕುಳಿತಿದ್ದನ್ನು ಅದೇ ಮಾರ್ಗದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ ಇದ್ದ ಭಕ್ತಾದಿಗಳು ಗಮನಿಸಿದ್ದಾರೆ. ತಕ್ಷಣವೇ ಮೊಬೈಲ್‌ನಲ್ಲಿ ಆ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಭಾಗದಲ್ಲಿ ಇತ್ತೀಚಿಗೆ ರಾತ್ರಿಯ ಸಂದರ್ಭದಲ್ಲಿ ಚಿರತೆ ಸಂಚಾರ ಹೆಚ್ಚಾಗಿದ್ದು ಸಂಚರಿಸುವಂತಹ ವಾಹನ ಸಾವಿರಾರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಕೋರಿದ್ದಾರೆ.

 

Tags:
error: Content is protected !!