ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ ಒಂದು ಚಿರತೆ ಅದರ ಎರಡು ಚಿರತೆ ಮರಿಗಳ ಜತೆ ಕುಳಿತಿದ್ದನ್ನು ಅದೇ ಮಾರ್ಗದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ನಲ್ಲಿ ಇದ್ದ ಭಕ್ತಾದಿಗಳು ಗಮನಿಸಿದ್ದಾರೆ. ತಕ್ಷಣವೇ ಮೊಬೈಲ್ನಲ್ಲಿ ಆ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಭಾಗದಲ್ಲಿ ಇತ್ತೀಚಿಗೆ ರಾತ್ರಿಯ ಸಂದರ್ಭದಲ್ಲಿ ಚಿರತೆ ಸಂಚಾರ ಹೆಚ್ಚಾಗಿದ್ದು ಸಂಚರಿಸುವಂತಹ ವಾಹನ ಸಾವಿರಾರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಕೋರಿದ್ದಾರೆ.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…