ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ.
ಗುರುವಾರ ಕಟ್ನವಾಡಿ-ಕುಂತೂರು ಮಾರ್ಗದ ನಡುವೆ ಕಾಣಿಸಿಕೊಂಡಿದ್ದ ಚಿರತೆ ತಡರಾತ್ರಿ ಕೆಸ್ತೂರು ಬಳಿ ನಾಯಿಯೊಂದರ ಮೇಲೆ ದಾಳಿ ನಡೆಸಿದೆ.
ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದ ಕಲ್ಲುಬಂಡೆಯ ಮೇಲೆ ಚಿರತೆ ಕುಳಿತಿರುವ ಚಿತ್ರ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ 4 ದಿನಗಳಿಂದ ಚಿರತೆಯ ಸೆರೆಗಾಗಿ ಶ್ರಮ ವಹಿಸುತ್ತಿರುವ ಮೈಸೂರಿನ ಚಿರತೆ ಸೆರೆ ವಿಶೇಷ ಕಾರ್ಯಪಡೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಜಾಡು ಹಿಡಿದು ಬೆಟ್ಟದ ಬಳಿ ಬೋನು ಇರಿಸಿದ್ದಾರೆ.
ಚಿರತೆಯು ಕುಂತೂರು ಬೆಟ್ಟದ ಕಡೆಯಿಂದ ಬೆಟ್ಟದ ಹೊಸೂರು ಕಡೆಗೆ ತೆರಳಿದೆ ಎಂದು ಸ್ಥಳೀಯರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಕಳೆದ 4 ದಿನಗಳಿಂದ ಚಾಲಾಕಿ ಚಿರತೆಯು ಜಾಡು ಬದಲಿಸುತ್ತ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಯಾಮಾರಿಸುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…