ಪ್ರಾತಿನಿಧಿಕ ಚಿತ್ರ
ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ.
ಗುರುವಾರ ಕಟ್ನವಾಡಿ-ಕುಂತೂರು ಮಾರ್ಗದ ನಡುವೆ ಕಾಣಿಸಿಕೊಂಡಿದ್ದ ಚಿರತೆ ತಡರಾತ್ರಿ ಕೆಸ್ತೂರು ಬಳಿ ನಾಯಿಯೊಂದರ ಮೇಲೆ ದಾಳಿ ನಡೆಸಿದೆ.
ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದ ಕಲ್ಲುಬಂಡೆಯ ಮೇಲೆ ಚಿರತೆ ಕುಳಿತಿರುವ ಚಿತ್ರ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ 4 ದಿನಗಳಿಂದ ಚಿರತೆಯ ಸೆರೆಗಾಗಿ ಶ್ರಮ ವಹಿಸುತ್ತಿರುವ ಮೈಸೂರಿನ ಚಿರತೆ ಸೆರೆ ವಿಶೇಷ ಕಾರ್ಯಪಡೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಜಾಡು ಹಿಡಿದು ಬೆಟ್ಟದ ಬಳಿ ಬೋನು ಇರಿಸಿದ್ದಾರೆ.
ಚಿರತೆಯು ಕುಂತೂರು ಬೆಟ್ಟದ ಕಡೆಯಿಂದ ಬೆಟ್ಟದ ಹೊಸೂರು ಕಡೆಗೆ ತೆರಳಿದೆ ಎಂದು ಸ್ಥಳೀಯರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಕಳೆದ 4 ದಿನಗಳಿಂದ ಚಾಲಾಕಿ ಚಿರತೆಯು ಜಾಡು ಬದಲಿಸುತ್ತ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಯಾಮಾರಿಸುತ್ತಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…