ಪ್ರಾತಿನಿಧಿಕ ಚಿತ್ರ
ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ.
ಗುರುವಾರ ಕಟ್ನವಾಡಿ-ಕುಂತೂರು ಮಾರ್ಗದ ನಡುವೆ ಕಾಣಿಸಿಕೊಂಡಿದ್ದ ಚಿರತೆ ತಡರಾತ್ರಿ ಕೆಸ್ತೂರು ಬಳಿ ನಾಯಿಯೊಂದರ ಮೇಲೆ ದಾಳಿ ನಡೆಸಿದೆ.
ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದ ಕಲ್ಲುಬಂಡೆಯ ಮೇಲೆ ಚಿರತೆ ಕುಳಿತಿರುವ ಚಿತ್ರ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ 4 ದಿನಗಳಿಂದ ಚಿರತೆಯ ಸೆರೆಗಾಗಿ ಶ್ರಮ ವಹಿಸುತ್ತಿರುವ ಮೈಸೂರಿನ ಚಿರತೆ ಸೆರೆ ವಿಶೇಷ ಕಾರ್ಯಪಡೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಜಾಡು ಹಿಡಿದು ಬೆಟ್ಟದ ಬಳಿ ಬೋನು ಇರಿಸಿದ್ದಾರೆ.
ಚಿರತೆಯು ಕುಂತೂರು ಬೆಟ್ಟದ ಕಡೆಯಿಂದ ಬೆಟ್ಟದ ಹೊಸೂರು ಕಡೆಗೆ ತೆರಳಿದೆ ಎಂದು ಸ್ಥಳೀಯರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಕಳೆದ 4 ದಿನಗಳಿಂದ ಚಾಲಾಕಿ ಚಿರತೆಯು ಜಾಡು ಬದಲಿಸುತ್ತ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಯಾಮಾರಿಸುತ್ತಿದೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…