ಚಾಮರಾಜನಗರ

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ತಿಂಗಳು ಚಿರತೆ ದಾಳಿಯಿಂದ ಮಂಡ್ಯ ಮೂಲದ ಚಿರನಹಳ್ಳಿ ಗ್ರಾಮದ ಪ್ರವೀಣ್ ಎಂಬವರು ಮತಪಟ್ಟಿದ್ದರು. ಇದಾದ ನಂತರ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿದಿದ್ದರು.

ಇದಾದ ನಂತರ ಫೆಬ್ರವರಿ 10ರ ಮಂಗಳವಾರದಂದು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಚನ್ನಪಟ್ಟಣ ಮೂಲದ ಬಾಲಕ ಶ್ರೇಯಸ್ ಎಂಬುವವನ ಮೇಲೆ ಚಿರತೆ ದಾಳಿ ನಡೆಸಿತ್ತು. ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದನು.

ಬಳಿಕ ಅರಣ್ಯ ಇಲಾಖೆ ಗೃಹರಕ್ಷಕ ದಳದ ಸಿಬ್ಬಂದಿ ಜಂಟಿಯಾಗಿ ತಂಡಗಳನ್ನು ರಚನೆ ಮಾಡಿ ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಗಸ್ತು ಮಾಡಲಾಗುತ್ತಿತ್ತು. ಇವರಿಂದ ಪಾದ ಯಾತ್ರಿಕರಿಗೆ ಯಾವುದೇ ತೊಂದರೆ ಆಗಿರಲಿಲ್ಲ. ಇದೀಗ ಮತ್ತೊಮ್ಮೆ ತಾಳುಬೆಟ್ಟದ ಮುಂಭಾಗದ ನಾಲ್ಕನೇ ತಿರುವಿನಲ್ಲಿ ಚಿರತೆ ದರ್ಶನ ನೀಡಿರುವುದು ಪಾದಯಾತ್ರಿಕರು ವಾಹನ ಸವಾರರಿಗೆ ಆತಂಕವನ್ನುಂಟು ಮಾಡಿದೆ.

ಶುಕ್ರವಾರ ತಡರಾತ್ರಿ ಕನಕಪುರ ಮೂಲದ ಹಾರೋಹಳ್ಳಿಯ ಕೃಷ್ಣಪ್ಪ ಶಶಿ ಚಂದನ್ ಚಂದ್ರಪ್ಪ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ತಾಳು ಬೆಟ್ಟದ ಮುಂಭಾಗದ ನಾಲ್ಕನೇ ತಿರುವಿನಲ್ಲಿ ಚಿರತೆ ರಸ್ತೆಯ ಬಲಬದಿಯಲ್ಲಿ ಕುಳಿತಿರುವುದನ್ನು ಗಮನಿಸಿ ಕಾರನ್ನು ನಿಲ್ಲಿಸಿದ್ದಾರೆ. ಚಿರತೆ ಸುಮಾರು ಎರಡು ನಿಮಿಷಗಳ ಕಾಲ ಯಾವುದೇ ಶಬ್ದಗಳಿಗೂ ಜಗ್ಗದೆ ಕುಳಿತಿತ್ತು ಸಿಗಲ್ಲದೆ ವಾಹನ ಸಂಚರಿಸುತ್ತಿದ್ದರು. ಚಿರತೆ ಮಾತ್ರ ಎತ್ತ ಕಡೆಯೂ ಹೋಗದೆ ಕುಂತಲ್ಲೇ ಕುಳಿತು, ಯಾವುದೇ ವಾಹನಗಳ ಸಂಚರಿಸುತ್ತಿದ್ದರು ಕ್ಯಾರೆ ಎನ್ನಲಿಲ್ಲ ಇದನ್ನು ನೋಡಿದ ಕಾರಿನಲ್ಲಿದ್ದ ಭಕ್ತಾದಿಗಳು ಭಯ ಪಟ್ಟಿದ್ದಾರೆ. ನಂತರ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.

ಚಿರತೆಯ ರಂಗಸ್ವಾಮಿಒಡ್ಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದು ನಮ್ಮ ಇಲಾಖೆಯ ಸಿಬ್ಬಂದಿಗಳಿಗೂ ಕಾಣಿಸಿಕೊಂಡಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಇರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಿರತೆ ಸರೆ ಹಿಡಿಯಲು ಆಗುತ್ತಿಲ್ಲ, ಇಳಿಜಾರು ಪ್ರದೇಶ ಇರುವುದರಿಂದ ಅರವಳಿಕೆ ಚುಚ್ಚುಮದ್ದು ನೀಡಲು ಸಹ ತೊಂದರೆಯಾಗುತ್ತಿದೆ. ಸಮತಟ್ಟು ಪ್ರದೇಶವಾಗಿದ್ದರೆ ಕೂಬಿಂಗ್ ಮಾಡಬಹುದಾಗಿತ್ತು. ಅತೀ ಶೀಘ್ರದಲ್ಲಿಯೇ ಚಿರತೆ ಸೆರೆ ಹಿಡಿಯಲು ಸೂಕ್ತ ಕ್ರಮ ವಹಿಸಲಾಗುವುದು, ಚಿರತೆ ರಸ್ತೆಗೆ ಬಾರದಂತೆ ಗಸ್ತು ಮಾಡಲಾಗುತ್ತಿದೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಆಂದೋಲನಕ್ಕೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 mins ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

14 mins ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

22 mins ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

26 mins ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

2 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

3 hours ago