ಚಾಮರಾಜನಗರ

ಮದ್ದೂರು ಬಳಿ ಬೋನಿಗೆ ಬಿದ್ದ ಚಿರತೆ

ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ.

ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ ಮೂಡಿಸಿತ್ತು. ಪರಿಣಾಮ ಸಾರ್ವಜನಿಕರು, ರೈತರು ಜಮೀನುಗಳಿಗೆ ತೆರಳಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ಗ್ರಾಮಸ್ಥರ ಒತ್ತಾಯದ ಮೇರೆಗೆ ಮದ್ದೂರು ಬಳಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಸೋಮವಾರ ( ಅಕ್ಟೋಬರ್‌ 21 ) ರಾತ್ರಿ ಚಿರತೆ ಬೋನಿಗೆ ಸೆರೆ ಸಿಕ್ಕಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಬಿಳಿಗಿರಿರಂಗನ ಬೆಟ್ಟದ ಕಾಡಿಗೆ ಬಿಟ್ಟಿದ್ದಾರೆ. ಚಿರತೆ ಬೋನಿಗೆ ಬಿದ್ದ ಮದ್ದೂರು ಹಾಗೂ ಸುತ್ತಲಿನ ಗ್ರಾಮಗಳ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

 

ಪ್ರಸಾದ್‌ ಲಕ್ಕೂರು

ಚಾಮರಾಜನಗರ ಜಿಲ್ಲೆಯ ಲಕ್ಕೂರು ಗ್ರಾಮದವನಾದ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ.ಪತ್ರಿಕೋದ್ಯಮ ಪದವಿ ಪಡೆದಿದ್ದು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯ ಮಟ್ಟದ ಉಷಾ ಕಿರಣ, ವಿಜಯ ಕರ್ನಾಟಕ, ವಿಜಯವಾಣಿ, ಜಿಲ್ಲಾ ಮಟ್ಟದ ಪ್ರಜಾನುಡಿ, ಜನಮಿತ್ರ ಪತ್ರಿಕೆಗಳಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ 2 ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

4 mins ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

31 mins ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

49 mins ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

1 hour ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

1 hour ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

11 hours ago