ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ.
ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ ಮೂಡಿಸಿತ್ತು. ಪರಿಣಾಮ ಸಾರ್ವಜನಿಕರು, ರೈತರು ಜಮೀನುಗಳಿಗೆ ತೆರಳಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಗ್ರಾಮಸ್ಥರ ಒತ್ತಾಯದ ಮೇರೆಗೆ ಮದ್ದೂರು ಬಳಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಸೋಮವಾರ ( ಅಕ್ಟೋಬರ್ 21 ) ರಾತ್ರಿ ಚಿರತೆ ಬೋನಿಗೆ ಸೆರೆ ಸಿಕ್ಕಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಬಿಳಿಗಿರಿರಂಗನ ಬೆಟ್ಟದ ಕಾಡಿಗೆ ಬಿಟ್ಟಿದ್ದಾರೆ. ಚಿರತೆ ಬೋನಿಗೆ ಬಿದ್ದ ಮದ್ದೂರು ಹಾಗೂ ಸುತ್ತಲಿನ ಗ್ರಾಮಗಳ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…