ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ ವಿಶ್ವಾಸವನ್ನು ಸಂಪಾದಿಸಿದ್ದಾರೆ.
ಸಂಸದರಾಗಿ ಇಡೀ ದೇಶದಲ್ಲೇ ನಂ.೧ ಸ್ಥಾನ ಪಡೆದಿದ್ದವರು ಧೃವನಾರಾಯಣ್. ಅದೇ ರೀತಿಯ ಹೆಸರನ್ನು ಸುನಿಲ್ ಬೋಸ್ ಅವರು ಗಳಿಸಬೇಕು ಎಂಬುದು ನಮ್ಮೆಲ್ಲ ಇಚ್ಚೆ ಎಂದು ಅಭಿಪ್ರಾಯ ತಿಳಿಸಿದರು.
ಚಾಮರಾಜನಗರದ ೮ ವಿಧಾನಸಭಾ ಕ್ಷೇತ್ರದಲ್ಲಿ ೭ರಲ್ಲಿ ನಮ್ಮ ಪಕ್ಷದ ಶಾಸಕರಿದ್ದಾರೆ. ಹನೂರಿನಲ್ಲಿ ಮಾತ್ರ ರವೀಂದ್ರ ಸೋತರು. ಆದರೆ ಈ ಬಾರಿ ಹನೂರಿನಲ್ಲೂ ಬಹುಮತ ಸಿಗುತ್ತದೆ ಎಂಬ ವಿಶ್ವಾಸ ಇದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಸುನಿಲ್ ಬೋಸ್ ಮೂರು ಲಕ್ಷ ಮತಗಳ ಅಂತರದಿಂದ ಗೆದ್ದು ಲೋಕಸಭೆಗೆ ಪ್ರವೇಶ ಮಾಡುವ ಮೂಲಕ ರಾಜಕೀಯ ಪ್ರಾರಂಭ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಈ ವೇಳೆ ಬೃಹತ್ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸುನಿಲ್ ಬೋಸ್ ಜತೆಗಿದ್ದರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…